Advertisement

ಅ.19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ?

11:32 PM Oct 16, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.19 ಹಾಗೂ 20ರಂದು ದಿಲ್ಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ.

Advertisement

ಉಪ ಚುನಾವಣೆ ಪ್ರಚಾರದ ನಡುವೆಯೇ ಅವರು ದಿಲ್ಲಿಗೆ ತೆರಳಲು ಮುಂದಾಗಿರುವುದು ಬಿಜೆಪಿ ವಲಯದಲ್ಲಿ ಕುತೂಹಲ ಮೂಡಿಸಿದೆ.

ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಅನುದಾನ, ಕೇಂದ್ರ ಪುರಸ್ಕೃತ ಯೋಜನೆಗಳ ವಿಚಾರ ಕುರಿತು ಚರ್ಚಿಸಲು ಹೋಗುತ್ತಿದ್ದಾರೆ ಎಂದು ಹೇಳಲಾಗಿದೆ.

ಅಕ್ಟೋಬರ್‌ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಲ್ಲಿಗೆ ತೆರಳಿದ್ದರಾದರೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಭೇಟಿ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next