Advertisement

ವಾರಾಂತ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ

09:51 PM Aug 16, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾರಾಂತ್ಯದಲ್ಲಿ ಹೊಸದಿಲ್ಲಿಗೆ ತೆರಳುವ ಸಾಧ್ಯತೆಗಳು ಇವೆ. ಬಹುದಿನಗಳಿಂದ ಮುಂದೂಡಲಾಗುತ್ತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ವರಿಷ್ಠ ನಾಯಕರನ್ನು ಭೇಟಿ ಮಾಡುವುದಕ್ಕಾಗಿ ಈ ಪ್ರವಾಸ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಮಯ ದೊರೆತರೆ ಹೊಸದಿಲ್ಲಿಗೆ ತೆರಳಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ಸರಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆ. 28ರಂದು ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜೆ.ಪಿ. ನಡ್ಡಾ ಅವರಿಗೆ ಅಧಿಕೃತ ಆಹ್ವಾನವನ್ನು ಮುಖ್ಯಮಂತ್ರಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next