Advertisement

ಚಿಕ್ಕಮಗಳೂರಿನಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಸ

09:11 AM Nov 15, 2022 | Team Udayavani |

ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಂದು ಚಿಕ್ಕಮಗಳೂರು ಪ್ರವಾಸ ಮಾಡಲಿದ್ದು, ಜನಸಂಕಲ್ಪ ಯಾತ್ರೆ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Advertisement

ಕಡೂರು-ತರೀಕೆರೆ ತಾಲೂಕಿನಲ್ಲಿ ಸಿಎಂ ಪ್ರವಾಸ ಮಾಡಲಿದ್ದು, ಮೊದಲು ಕಡೂರು ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10:30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಕಡೂರಿಗೆ ಆಗಮಿಸಲಿದ್ದಾರೆ.

ಬಿಎಸ್ ವೈ ಸಿಎಂ ಆಗಿದ್ದಾಗ ನೀರಾವರಿ ಯೋಜನೆಗೆ ಅನುದಾನ ನೀಡಲಾಗಿತ್ತು. 108 ಕೆರೆಗಳಿಗೆ ನೀರು ತುಂಬಿಸಲು 1289 ಕೋಟಿ ಬಿಡುಗಡೆ ಮಾಡಲಾಗಿತ್ತು. ಆ ವೇಳೆ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಸಚಿವರಾಗಿದ್ದರು. ಹೀಗಾಗಿ ಸಿಎಂ, ಮಾಜಿ ಸಿಎಂ ಇಬ್ಬರಿಗೂ ವಿಶೇಷ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಡೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಆ ಬಳಿಕ ಮಧ್ಯಾಹ್ನ 1:30 ಕ್ಕೆ ತರೀಕೆರೆಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 600 ಕೋಟಿ ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next