Advertisement

ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕಿಲ್ಲ; ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

01:05 AM Oct 12, 2022 | Team Udayavani |

ಬೆಂಗಳೂರು: ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಮೊಟಕುಗೊಳ್ಳಲಿದೆ ಎಂಬ ಆತಂಕ ದೂರವಾಗಿದೆ. ಈ ಕುರಿತಾದ ಯಾವುದೇ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.

Advertisement

ಮಂಗಳವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಈ ಕುರಿತಂತೆ ಎದ್ದಿರುವ ಆತಂಕದ ಬಗ್ಗೆ ಮುಖ್ಯಮಂತ್ರಿ ಬಳಿ ಪ್ರಸ್ತಾವಿಸಿದರು. ಆಗ ಸಿಎಂ, ಕರ್ನಾಟಕ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ ರಾಜ್‌ ಅಧಿನಿಯಮಗಳಿಗೆ ತಿದ್ದುಪಡಿ ತರುವ ಯಾವುದೇ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ತಿಳಿ ಸಿರು ವು ದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್‌ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ. ಗ್ರಾಮೀಣ ಭಾಗ ದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ. ಈಗಿರುವ ವ್ಯವಸೆ § ಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರೀ ಕರಣ ಗೊಳಿಸಲು ರಾಜ್ಯ ಸರಕಾರ ಬದ್ಧ ಎಂದು ಸಚಿವರು ಹೇಳಿದ್ದಾರೆ.

ವಿವಾದಾತ್ಮಕ ನಿರ್ಣಯಗಳೇನು?
2022ರ ಆ.19ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 10ಕ್ಕೂ ಹೆಚ್ಚು ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು. ಕಟ್ಟಡಗಳಿಗೆ ಪರವಾನಿಗೆ, ಕಾರ್ಖಾನೆ, ಹೊಟೇಲ್‌ ಮತ್ತು ಅಂಗಡಿಗಳ ಸ್ಥಾಪನೆಗೆ ಪರವಾನಿಗೆ ನೀಡಲು ಗ್ರಾಮ ಪಂಚಾಯತ್‌ಗಳಿಗಿದ್ದ ಅಧಿಕಾರವನ್ನು ಪಿಡಿಒಗಳಿಗೆ ನೀಡಲು ನಿರ್ಣಯಿಸಲಾಗಿತ್ತು. ಅದೇ ರೀತಿ ಗ್ರಾಪಂ ಅಧ್ಯಕ್ಷರಿಗಿದ್ದ ಆರ್ಥಿಕ ನಿರ್ವಹಣೆ ಅಧಿಕಾರವನ್ನು ಪಿಡಿಒಗಳಿಗೆ ನೀಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next