Advertisement

ಮುಖ್ಯಮಂತ್ರಿ ಚರ್ಚೆ ಅವಶ್ಯಕತೆಯಿಲ್ಲ

01:01 AM May 17, 2019 | Sriram |

ಕಲಬುರಗಿ: ‘ಸದ್ಯ ಮುಖ್ಯಮಂತ್ರಿ ಇದ್ದಾರೆ. ಈಗ ಅದರ ಕುರಿತಾಗಿ ಚರ್ಚಿಸುವ ಅವಶ್ಯಕತೆ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈಗ ಮುಖ್ಯಮಂತ್ರಿ ಆಯ್ಕೆ ನಡೆಯುತ್ತಿಲ್ಲ. ನನ್ನನ್ನು ಸೇರಿ ಹಲವರು ಮುಖ್ಯಮಂತ್ರಿ ಆಗೋ ಆಸೆ ಹೊಂದಿದ್ದಾರೆ’ ಎಂದರು.

ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಬೀಳಲ್ಲ. ಯಡಿಯೂರಪ್ಪ ನೂರು ಸಲ ಜಪ ಮಾಡಿದರೂ ಸರ್ಕಾರಕ್ಕೆ ಏನೂ ಆಗಲ್ಲ. ಕಾಂಗ್ರೆಸ್‌-ಜೆಡಿಎಸ್‌ ನಾಯಕರ ಹೇಳಿಕೆಗಳು ವೈಯಕ್ತಿಕ. ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ನಲ್ಲಿ ತಪ್ಪೇನಿದೆ? ಅವರು ಮತ್ತು ರೇವಣ್ಣ ಆತ್ಮೀಯರಾಗಿದ್ದಾರೆ. ಈ ಹಿಂದೆ ಒಂದೇ ಪಕ್ಷದಲ್ಲಿದ್ದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next