Advertisement

ಡಿಸಿ, ಸಿಇಓಗಳೊಂದಿಗೆ ಮುಖ್ಯಮಂತ್ರಿ ಸಭೆ

06:30 AM Jul 21, 2018 | |

ಬೆಂಗಳೂರು: ಜಿಲ್ಲಾಡಳಿತವನ್ನು ಕ್ರಿಯಾಶೀಲಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜು.30 ಮತ್ತು 31ರಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ.

Advertisement

ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆಯುತ್ತಿರುವ ಮೊಟ್ಟ ಮೊದಲ ಸಭೆ ಇದಾಗಿದೆ.
ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒಗಳಿಗೆ ಈ ಕುರಿತು ಸಂದೇಶ ರವಾನಿಸಲಾಗಿದ್ದು, ಮಾಹಿತಿಗಳೊಂದಿಗೆ ಸಿದಟಛಿವಾಗಿ ಬರುವಂತೆ ಸೂಚಿಸಲಾಗಿದೆ.

ಭಾರೀ ಮಳೆಯಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೋಟ್ಯಂತರ ರೂ.ಆಸ್ತಿಪಾಸ್ತಿ ನಷ್ಟವಾಗಿದೆ. ರಸ್ತೆ, ಸೇತುವೆಗಳು ಹಾನಿಗೊಳಗಾಗಿವೆ. ಇನ್ನೊಂದೆಡೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗದೆ ಸಮಸ್ಯೆಯಾಗಿದೆ. ಈಗಾಗಲೇ ಜಿಲ್ಲಾಡಳಿತಗಳು ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುತ್ತಿವೆಯಾದರೂ ಸಾಕಷ್ಟು ದೂರುಗಳು ಬರುತ್ತಿವೆ. ಈ ಎಲ್ಲಾ ಕಾರಣಗಳಿಂದಾಗಿ ಸಭೆ ಮಹತ್ವ ಪಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next