Advertisement
ಬೆಂಗಳೂರು: ಕಾಂಗ್ರೆಸ್ ಜತೆ ಮೈತ್ರಿ ಸರ್ಕಾರಕ್ಕೆ ಮುಂದಾಗಿದ್ದು, ಹಿಂದಿನ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎದುರಿಸಿದ ಅವಮಾನ, ಸಮಸ್ಯೆಗಳನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸದನದಲ್ಲಿ ವಿವರಿಸಿದರು. ಅಲ್ಲದೆ, ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧವೂ ಕಿಡಿ ಕಾರಿದರು.
Related Articles
Advertisement
ಆದರೆ, ಗೋವಾದಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್ಗೆ ರಾಜ್ಯಪಾಲರು ಆಹ್ವಾನ ನೀಡಿದ್ದರೇ? ಕಾಂಗ್ರೆಸ್ ಜತೆ ಸಮ್ಮಿಶ್ರ ಸರ್ಕಾರ ರಚಿಸಲು ಮುಂದಾದ ಬಳಿಕ ನನಗೆ ಇಡಿ ಅಧಿಕಾರಿಯೊಬ್ಬರು ಬೆದರಿಕೆ ಹಾಕಿದ್ದರು.
ನನ್ನನ್ನು ಸಂಪರ್ಕಿಸಿ, ನೀವು ಮಲೇಷಿಯಾದಲ್ಲಿ ಆಸ್ತಿ ಹೊಂದಿದ್ದೀರಂತೆ ಎಂದರು. ಇದ್ದರೆ ಕ್ರಮ ಕೈಗೊಳ್ಳಿ ಎಂದು ಹೇಳಿ ಕಳುಹಿಸಿದ್ದೆ. ಕೇಂದ್ರ ಸರ್ಕಾರ ಇಡಿ, ಆದಾಯ ತೆರಿಗೆ ಇಲಾಖೆಯನ್ನು ಮುಂದಿಟ್ಟುಕೊಂಡು ಆಟ ಆಡುವುದಕ್ಕೆಅವಕಾಶ ನೀಡಬಾರದು. ಸಮಗ್ರ ಕರ್ನಾಟಕ ನನ್ನ ಗುರಿ
ಗಟ್ಸ್ ಇದ್ದರೆ ರೈತರ ಸಾಲ ಮನ್ನಾ ಮಾಡಿ. ಉತ್ತರ ಕರ್ನಾಟಕ ನಿರ್ಲಕ್ಷಿಸಿದರೆ ಜನ ಕ್ಷಮಿಸುವುದಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇಲ್ಲಿ ಉತ್ತರ ಕರ್ನಾಟಕ, ಹಳೇ ಕರ್ನಾಟಕ ಎಂದು ವಿಭಾಗ ಮಾಡುವುದಿಲ್ಲ. ಅಖಂಡ ಕರ್ನಾಟಕದ ಅಭಿವೃದ್ಧಿ ಇಟ್ಟುಕೊಂಡು ಕೆಲಸ ಮಾಡಬೇಕು. ಜನರಿಗೆ ತೆರಿಗೆ ಹಾಕಿ ಸಾಲ ಮನ್ನಾ ಮಾಡುವುದಿಲ್ಲ. ಚುನಾವಣೆ ವೇಳೆ ಕೊಟ್ಟ ಮಾತಿನಂತೆ ರೈತರು ಮಾಡಿದ ಸಂಪೂರ್ಣ ಸಾಲ ಮನ್ನಾ ಮಾಡುವುದು ನನ್ನ ಜವಾಬ್ದಾರಿ. ಇದರ ಜತೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ನ ಪ್ರಣಾಳಿಕೆಗಳನ್ನೂ ಜಾರಿಗೊಳಿಸುತ್ತೇನೆ. ಆದರೆ, ಸಮ್ಮಿಶ್ರ ಸರ್ಕಾರವಾಗಿರುವುದರಿಂದ ಕಾಂಗ್ರೆಸ್ನವರ ಅಭಿಪ್ರಾಯ ಪಡೆಯಬೇಕಾಗುತ್ತದೆ. ಸಮ್ಮಿಶ್ರ ಸರ್ಕಾರವೊಂದು ದೇಶಕ್ಕೆ ಮಾದರಿಯಾಗಿ ಹೇಗೆ ನಡೆಯಬಹುದು ಎಂಬುದನ್ನು ತೋರಿಸಿಕೊಡುತ್ತೇನೆ. ಆದ್ದರಿಂದ ನನ್ನ ಸರ್ಕಾರದ ಮೇಲೆ ವಿಶ್ವಾಸ ತೋರಿಸಿ ಎಂದು ಸದನದ ಸದಸ್ಯರಲ್ಲಿ ಮನವಿ ಮಾಡುತ್ತೇನೆ.