Advertisement

Hanur ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದ್ದೂರಿ ಸ್ವಾಗತ

09:35 PM Sep 26, 2023 | |

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹನೂರು ಪಟ್ಟಣದಲ್ಲಿ ಮಾಜಿ ಶಾಸಕ ಆರ್.ನರೇಂದ್ರ, ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.

Advertisement

ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಸಮೀಪ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ವಾದ್ಯ ಮೇಳ, ತಮಟೆ ಮೇಳಗಳೊಂದಿಗೆ ಸಂಭ್ರಮದಿಂದ ಸ್ವಾಗತಿಸಲಾಯಿತು. ಈ ವೇಳೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಜೈಕಾರಗಳನ್ನು ಮೊಳಗಿಸಿದರು.

ಮುಖ್ಯಮಂತ್ರಿಗಳಿಗೆ ಸನ್ಮಾನ: ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ವೆಂಕಟೇಶ್ ಅವರಿಗೆ ಪೇಟ ತೊಡಿಸಿ ಹಾರ ತುರಾಯಿಗಳನ್ನು ಹಾಕಿ ಸನ್ಮಾನಿಸಲಾಯಿತು. ಇದೇ ವೇಳೆ ಮಾಜಿ ಶಾಸಕ ನರೇಂದ್ರ ಅವರಿಗೆ ನಿಗಮ ಮಂಡಳಿ ಸ್ಥಾನ ಮಾನ ಕಲ್ಪಿಸುವಂತೆ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆಗ್ರಹಿಸಿದರು.

ಟಿವಿಎಸ್ ಶೋರೂಂ ಉದ್ಘಾಟನೆ: ಕಾಂಗ್ರೆಸ್ ಪಕ್ಷದ ಕಚೇರಿಯ ಸಮೀಪದಲ್ಲಿ ಸಿದ್ದರಾಮಯ್ಯವರ ಅಭಿಮಾನಿ ಭಾಷ ಅವರು ನೂತನವಾಗಿ ತೆರೆದಿರುವ ಟಿವಿಎಸ್ ಮೋಟಾರ್ ಬೈಕ್ ಶೋರೂಂ ಅನ್ನು ಬಟನ್ ಹೊತ್ತುವ ಮೂಲಕ ಉದ್ಘಾಟಿಸಿದರು.

ನೂಕು ನುಗ್ಗಲು: ಕಾಂಗ್ರೆಸ್ ಪಕ್ಷದ ಕಚೇರಿಗೆ ಆಗಮಿಸಿದ್ದ ಸಿದ್ದರಾಮಯ್ಯನವರಿಗೆ ಹಾರ ತುರಾಯಿಗಳನ್ನು ಹಾಕಲು ಅಭಿಮಾನಿಗಳ ದಂಡೇ ನೆರೆದಿತ್ತು. ಈ ವೇಳೆ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಪರದಾಡುವಂತಾಗಿತ್ತು. ಈ ವೇಳೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಕಾರು ಹತ್ತುತ್ತಿದ್ದಂತೆ ಕಾರಿನ ಮೇಲೆ ನಿಂತು ಅಭಿಮಾನಿಗಳತ್ತ ಕೈ ಬೀಸಿದರು. ಈ ವೇಳೆ ನೆರೆದಿದ್ದವರ ಕರತಾಡನ ಮತ್ತು ಹರ್ಷೋದ್ಘಾರ ಮುಗಿಲು ಮುಟ್ಟುವಂತಿತ್ತು.

Advertisement

-ವಿನೋದ್ ಎನ್ ಗೌಡ

Advertisement

Udayavani is now on Telegram. Click here to join our channel and stay updated with the latest news.

Next