Advertisement

ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

11:49 AM Jan 19, 2021 | Team Udayavani |
ಕಾಪು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಡಾ. ಜಿ. ಶಂಕರ್, ದ.ಕ. ಮೊಗವೀರ ಮಹಾಜನ‌ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸು ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಸಿ.‌ ಅಮೀನ್ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ಮೂಲಕವಾಗಿ ಮುಖ್ಯಮಂತ್ರಿಗಳನ್ನು ಗೌರವಿಸಲಾಯಿತು.
Advertisement

Udayavani is now on Telegram. Click here to join our channel and stay updated with the latest news.

Next