Advertisement

ಬಡವರಿಗೆ ಸರಕಾರದಿಂದ ವತಿಯಿಂದ ಉಚಿತ ಹಾಲು ವಿತರಣೆ

09:28 AM Apr 02, 2020 | Hari Prasad |

ಬೆಂಗಳೂರು: ರೈತರು ಬೆಳೆದ ಉತ್ಪನ್ನಗಳನ್ಮು ಮಾರುಕಟ್ಟೆಗೆ ತರಲು ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅಭಯ ನೀಡಿರುವ ಸಿಎಂ ಯಡಿಯೂರಪ್ಪ, ಹಾಪ್‌ಕಾಮ್ಸ್‌ ಮೂಲಕವೂ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

ಜತೆಗೆ, ಗುರುವಾರದಿಂದ ಬಡವರಿಗೆ ಉಚಿತವಾಗಿ ಕೆಎಂಎಫ್‌ ಹಾಲು ನೀಡಲಾಗುವುದು. 7 ಲಕ್ಷ ಲೀ. ಹಾಲನ್ನು ಸರಕಾರವೇ ಖರೀದಿಸಿ ಕೊಳಚೆ ಪ್ರದೇಶಗಳು ಮತ್ತು ಬಡಜನರ ವಾಸಿಸುವ ಪ್ರದೇಶಗಳಲ್ಲಿ ಉಚಿತವಾಗಿ ಎ.14ರ ವರೆಗೆ ವಿತರಿಸಲಿದೆ ಎಂದು ಪ್ರಕಟಿಸಿದ್ದಾರೆ.

ಕೋವಿಡ್ 19 ವೈರಸ್ ಪರಿಸ್ಥಿತಿ ನಿಭಾಯಿಸಲು ಸಿಎಂ ಬಿಎಸ್‌ವೈ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತನ್ನ ಒಂದು ವರ್ಷದ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಈ ನಿರ್ಧಾರ ಘೋಷಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next