Advertisement

ಕಟ್ಟೆಚ್ಚರ ವಹಿಸಲು ಡೀಸಿಗಳಿಗೆ ಮುಖ್ಯಮಂತ್ರಿ ಸೂಚನೆ

07:00 AM Aug 16, 2018 | Team Udayavani |

ಬೆಂಗಳೂರು: ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸಿಎಂ ಕುಮಾರಸ್ವಾಮಿ ಆಯಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Advertisement

ಭಾರೀ ಮಳೆ ಸುರಿಯುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಕುರಿತಂತೆ ಬುಧವಾರ ಡೀಸಿಗಳಿಂದ ಮಾಹಿತಿ ಪಡೆದ ಅವರು, ಮಳೆಯಿಂದ ಸಂಭವಿಸಬಹುದಾದ ಪ್ರವಾಹ  ಭೂ ಕುಸಿತ ಮತ್ತಿತರ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹಾಗೂ ಪರಿಹಾರ ಒದಗಿಸಲು ಸನ್ನದ್ಧರಾಗಿರುವಂತೆ ಸೂಚಿಸಿದ್ದಾರೆ. ಈ ಮಧ್ಯೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೂ ಸೂಚನೆ ನೀಡಿರುವ ಮುಖ್ಯಮಂತ್ರಿಗಳು, ಜಿಲ್ಲೆಗಳಿಗೆ ಭೇಟಿ ನೀಡಿ ಮಳೆ ಹಾನಿ ಮತ್ತು ಪರಿಹಾರ ಕಾರ್ಯಗಳ ಬಗ್ಗೆ ನಿಗಾ ವಹಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರೂ ಈ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಪರಿಹಾರ ಕಾರ್ಯಗಳಿಗೆ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next