Advertisement

ಪಾಕ್‌ಗೆ ಮುಖ್ಯಮಂತ್ರಿ ಸಪೋರ್ಟ್‌: ಜೋಶಿ

06:25 AM Feb 01, 2018 | Team Udayavani |

ಕೊಪ್ಪಳ: ಆರ್‌ಎಸ್‌ಎಸ್‌, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ ಸಂಘಟನೆಗಳನ್ನು ಭಯೋತ್ಪಾದನಾ ಸಂಘಟನೆಗಳು ಎಂದಿರುವ ಸಿಎಂ ಸಿದ್ದರಾಮಯ್ಯ ಅವರು ಪಾಕಿಸ್ತಾನಿಗಳ ವಾದ ಪುರಸ್ಕರಿಸುತ್ತಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದರು.

Advertisement

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್‌ ಶಾ ಜೈಲಿಗೆ ಹೋಗಿ ಬಂದವರು ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ ಬ್ಯಾಂಕ್‌ಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪಾಕಿಸ್ತಾನಿಗಳ ವಾದಕ್ಕೆ ಸಹಕಾರ ನೀಡಿದಂತೆ ಕಾಣುತ್ತಿದೆ. ಪಾಕಿಸ್ತಾನದಲ್ಲಿ ಅವರ ಮಾತಿಗೆ ಬೆಂಬಲ ಸಿಕ್ಕಂತೆ ಕಾಣುತ್ತಿದೆ. 

ಮಹದಾಯಿ ವಿಷಯದಲ್ಲಿ ಸಿಎಂ ಕೆಲವು ಸಂಘಟನೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು, ವಾಟಾಳ್‌ ನಾಗರಾಜ್‌ ಕಾಂಗ್ರೆಸ್‌ ಏಜೆಂಟ್‌ರಂತೆ ಹಣ ಪಡೆದು ಹೋರಾಟ ಮಾಡುತ್ತಿದ್ದಾರೆ ಎಂದರು. ರಾಜ್ಯ ಸರ್ಕಾರ ಗೃಹ ಇಲಾಖೆಯನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದು, ಪೊಲೀಸ್‌ ಅಧಿ ಕಾರಿಗಳು ಸರ್ಕಾರದ ಅಣತಿಯಂತೆ ಕುಣಿಯುತ್ತಿದ್ದಾರೆ. ಆನಂದ್‌ ಸಿಂಗ್‌ ಕಾಂಗ್ರೆಸ್‌ ಸೇರುತ್ತಿದ್ದರೆ ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next