Advertisement

ಚಿಕ್ಕಬಳ್ಳಾಪುರ: ವಿದ್ಯುತ್ ತಂತಿ ತಾಗಿ ಕಟ್ಟಡ ನಿರ್ಮಾಣ ಕಾರ್ಮಿಕ ಸಾವು

08:55 AM Mar 11, 2020 | keerthan |

ಚಿಕ್ಕಬಳ್ಳಾಪುರ: ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕೂಲಿ ಕಾರ್ಮಿಕನಿಗೆ ಪಕ್ಕದಲ್ಲಿಯೇ ಹಾದು ಹೋಗಿದ್ದ ವಿದ್ಯುತ್ ತಂತಿಗಳು ತಾಗಿ ಸ್ಥಳದಲ್ಲಿಯೆ ಮೃತ ಪಟ್ಟಿರುವ ಘಟನೆ ಜಿಲ್ಲಾ ಕೇಂದ್ರದಲ್ಲಿ ಮಂಗಳವಾರ ನಡೆದಿದೆ.

Advertisement

ಮೃತ ಕೂಲಿ ಕಾರ್ಮಿಕನನ್ನು ಚಿಕ್ಕಬಳ್ಳಾಪುರ ನಗರದ ಕೋಟೆ ಪ್ರದೇಶದ ನಿವಾಸಿ ಮೆಹಬೂಬ್ (32) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಊಟಕ್ಕೆ ತೆರಳುವ ಮುನ್ನ ಈ ಘಟನೆ ನಡೆದಿದೆ.

ನಗರದ ಬಾಲಾಜಿ ಟಾಕೀಸ್ ರಸ್ತೆಯ ಎನ್‌ಪಿಓ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ವೇಳೆ ಕಟ್ಟಡಕ್ಕೆ ಸುತ್ತಲೂ ಇಡಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಪಕ್ಕದಲ್ಲಿಯೆ ಹಾದು ಹೋಗಿದ್ದ ವಿದ್ಯುತ್ ತಂತಿಗಳಿಗೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಆದರೂ ಅಕಸ್ಮಿಕವಾಗಿ ತಂತಿ ತಗಲಿದ್ದು ಮೆಹಬೂಬ್‌ ರನ್ನು ಬಲಿ ಪಡೆದಿದೆ.

ಹೈಟೆನ್ಶನ್ ತಂತಿ ಆಗಿದ್ದರಿಂದ ಅವಘಡ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next