Advertisement

ಕಡೂರು: ಒಂಟಿ ಮಹಿಳೆಯ ಕತ್ತು ಸೀಳಿ ಕೊಲೆಗೈದು ಮನೆ ದರೋಡೆ

11:03 AM Feb 19, 2020 | keerthan |

ಚಿಕ್ಕಮಗಳೂರು: ಒಂಟಿ ಮಹಿಳೆಯ ಕತ್ತು ಸೀಳಿ ಮನೆಯನ್ನು ದೋಚಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಲಕ್ಷ್ಮೀಶ ನಗರದಲ್ಲಿ ನಡೆದಿದೆ.

Advertisement

ಕೊಲೆಯಾದವರನ್ನು 31 ವರ್ಷದ ಕವಿತಾ ಎಂದು ಗುರುತಿಸಲಾಗಿದೆ. ಮೃತ ಕವಿತಾಳ ಗಂಡ ಕಡೂರು ತಾಲೂಕಿನ ಬೀರೂರು ನಗರದಲ್ಲಿ ದಂತ ವೈದ್ಯರಾಗಿದ್ದು ಪತಿ ಕ್ಲಿನಿಕ್‍ಗೆ ಹೋದಾಗ ದುರ್ಘಟನೆ ನಡೆದಿದೆ.

ಸಂಜೆ 6.45 ರಿಂದ 8.15ರೊಳಗೆ ಕವಿತಾ ಅವರ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸಂಜೆ 6.45ಕ್ಕೆ ಕವಿತಾ ಅವರು ಪತಿಯೊಂದಿಗೆ ಮೊಬೈಲ್ ನಲ್ಲಿ ಪತಿಯೊಂದಿಗೆ ಕೊನೆಯದಾಗಿ ಮಾತನಾಡಿದ್ದಾಳೆ.  8.15ಕ್ಕೆ ಆಕೆಯ ಸಾವಿನ ಸಂಗತಿ ಹೊರಬಂದಿದೆ ಎನ್ನಲಾಗಿದೆ.

ಕೊಲೆ ಮಾಡಿದವ ದುಷ್ಕರ್ಮಿಗಳು ಮನೆಯ ಬೀರುವಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ. ಮನೆಯ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಸ್ಥಳಕ್ಕೆ ಭೇಟಿ ನೀಡಿರುವ ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗಕ್ಕೆ ರವಾನಿಸಿದ್ದಾರೆ.

ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮನೆಯ ಸುತ್ತಮುತ್ತ ಇದ್ದ ಸಿಸಿಟಿವಿ ದೃಶ್ಯಾವಳಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಂಟಿ ಮಹಿಳೆಯ ಈ ರೀತಿಯ ಬರ್ಬರ ಕೊಲೆ ಕಂಡ ಕಡೂರಿಗರು ಬೆಚ್ಚಿ ಬಿದ್ದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next