Advertisement

ಚಿಕ್ಕಮಗಳೂರು: ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ ಪತ್ತೆಗೆ ಎಸ್ ಡಿಆರ್ ಎಫ್‌,ಈಶ್ವರ್ ಮಲ್ಪೆ ಶೋಧ

12:48 PM Jul 06, 2022 | Team Udayavani |

ಚಿಕ್ಕಮಗಳೂರು: ಮಳೆಯ ಆರ್ಭಟಕ್ಕೆ ಸೋಮವಾರ ಸಂಜೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸುಪ್ರೀತ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಎಸ್ ಡಿ ಆರ್ ಎಫ್ ತಂಡ ಆಗಮಿಸಿದೆ.

Advertisement

ಶಾಲೆಯಿಂದ ಮನೆಗೆ ಬರುವ ವೇಳೆ ಭಾರೀ ಮಳೆಯಾಗುತ್ತಿದ್ದ ಕಾರಣ, ಹೊಸಪೇಟೆ ಗ್ರಾಮದ ಹಳ್ಳದಲ್ಲಿ ನೀರಿನ ರಭಸಕ್ಕೆ ಸುಪ್ರೀತ ನೀರಿನಲ್ಲಿ ಕೊಚ್ಚಿ ಹೋಗಿದ್ದಳು. ಪತ್ತೆ ಕಾರ್ಯಾಚರಣೆ ನಡೆಸಿ ಇಂದಿಗೆ 40 ಗಂಟೆಗಳಾಗಿವೆ ಆದರೂ ಇದುವರೆಗೆ ಸುಪ್ರೀತ ಪತ್ತೆಯಾಗದ ಕಾರಣ ಸ್ಥಳಕ್ಕೆ ಎಸ್ ಡಿ ಆರ್‌ ಎಫ್‌ ತಂಡ ಆಗಮಿಸಿದೆ.

ಇದನ್ನೂ ಓದಿ: ಬೀದರ್:ಇತಿಹಾಸದಲ್ಲಿ ಪ್ರಥಮ ಬಾರಿಗೆ ಐಎಎಫ್ ಯುದ್ಧ ವಿಮಾನ ಹಾರಿಸಿದ ಅಪ್ಪ-ಮಗಳು

20 ಜನರ ತಂಡ ಹೊಸಪೇಟೆ ಗ್ರಾಮಕ್ಕೆ ಆಗಮಿಸಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆ ಕೂಡ ಆಗಮಿಸಿ  ಕೊಚ್ಚಿ ಹೋಗಿರುವ ಸ್ಥಳದಿಂದ  ಶೋಧಕಾರ್ಯದಲ್ಲಿ ನಿರತರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next