Advertisement

ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ

03:09 PM Apr 05, 2019 | Naveen |

ಚಿಕ್ಕಮಗಳೂರು: ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟಶ್ರೀನಿವಾಸ್‌ ಪೂಜಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಚಿಕ್ಕಮಗಳೂರು ಹಾಗೂ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚಿಸಿದರು.

Advertisement

ಚಿಕ್ಕಮಗಳೂರು ಕ್ಷೇತ್ರದ ಮಲ್ಲೇನಹಳ್ಳಿ ಹೊಸಪೇಟೆ, ತರೀಕೆರೆ ಪಟ್ಟಣ, ತಣಿಗೆಬೈಲಿನಲ್ಲಿ ಪ್ರಚಾರ ಕಾರ್ಯ ಕೈಗೊಂಡು ದೇಶದ ಅಭಿವೃದ್ಧಿಗೆ ಪಕ್ಷ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಐದು ವರ್ಷದ ಅವಧಿಯಲ್ಲಿ ಈ ಲೋಕಸಭಾ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಕಂಡಿದೆ. ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಯ ರಾಜ್ಯ ಹೆದ್ದಾರಿಗಳು ರಾಷ್ಟ್ರೀಯ ಹೆದ್ದಾರಿಯಾಗಿ ಮಾರ್ಪಟ್ಟಿವೆ. ವಿವಿಧ ಯೋಜನೆಗಳು ಬಡವರನ್ನು ತಲುಪಿವೆ. ಉಜ್ವಲ್‌ ಯೋಜನೆಯು ಬಡ ಮಹಿಳೆಯರನ್ನು ಊದು ಕೊಳವೆಯಿಂದ ಹೊರ ತಂದು ಆರೋಗ್ಯ ರಕ್ಷಿಸಲಾಗಿದೆ ಎಂದು ತಿಳಿಸಿದರು.
ತರೀಕೆರೆ ಪಟ್ಟಣದಲ್ಲಿ ನಡೆದ ಸಮಾರಂಭದಲ್ಲಿ ಕೋಟೆಶ್ರೀನಿವಾಸ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ರಾಜಪ್ಪ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ರಾಜಪ್ಪ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಪ್ರತಿಯೊಬ್ಬರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಸಮಾಜದ ಪ್ರಮುಖರಾದ ಶಿವರಾಜ್‌, ರಾಘವೇಂದ್ರ, ಪ್ರಕಾಶ್‌ ಬಂಗೇರ, ಗೋಪಾಲ್‌ ಪೂಜಾರಿ, ಮನೋಜ್‌, ಕೇಶವ, ಚನ್ನಯ್ಯ ಅಂಚನ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next