Advertisement

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಧಾನ: ಕೊರಳಪಟ್ಟಿ ಹಿಡಿದು ಹೊಡೆದಾಡಿದ ಮುಖಂಡರು

09:53 AM Nov 20, 2019 | keerthan |

ಚಿಕ್ಕಮಗಳೂರು: ಬ್ಯಾನರ್ ನಲ್ಲಿ ಮುಸ್ಲಿಂ ಮುಖಂಡರ ಫೋಟೋ ಹಾಕದ ವಿಷಯಕ್ಕೆರ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕೊರಳಪಟ್ಟಿ ಹೊಡೆದಾಡಿದ ಘಟನೆ ಮಂಗಳವಾರ ವರದಿಯಾಗಿದೆ.

Advertisement

ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಗಮನದ ಬೆನ್ನಲ್ಲೇ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ.

ನಗರದ ಹನುಮಂತಪ್ಪ ಸರ್ಕಲ್ ನಲ್ಲಿ ಇಂದು ಈ ಘಟನೆ ನಡೆದಿದ್ದು, ಫೋಟೋ ಹಾಕದಿದ್ದಕ್ಕೆ ಮುಸ್ಲಿಂ ಕಾಂಗ್ರೆಸ್ ಮುಖಂಡರು ಆಕ್ರೋಶಗೊಂಡಿದ್ದಾರೆ. ಮುಸ್ಲಿಮರ ವೋಟ್ ಬೇಕು ಮುಸ್ಲಿಂ ಮುಖಂಡರ ಫೋಟೋ ಬೇಡ ಎಂದು ಆಕ್ರೋಶ ಹೊರಹಾಕಿದ್ದಾರೆ.

ನಡುರಸ್ತೆಯಲ್ಲೇ ಕೈ ಮುಖಂಡರು ಜಗಳಕ್ಕೆ ಬಿದ್ದಕಾರಣ ಹನುಮಂತಪ್ಪ ಸರ್ಕಲ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಸಮಸ್ಯೆ ಅನುಭವಿಸಬೇಕಾಯಿತು.

Advertisement

Udayavani is now on Telegram. Click here to join our channel and stay updated with the latest news.

Next