Advertisement

ಚೇಳೂರು: ಲಾರಿ-ಕಾರು ನಡುವೆ ಭೀಕರ ಅಪಘಾತ; ಮೂವರಿಗೆ ಗಾಯ

02:04 PM Aug 21, 2022 | Team Udayavani |

ಚೇಳೂರು: ಹೋಬಳಿಯ ಬಿದರೆ ಕೆರೆ ಹಿಂಭಾಗ ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

Advertisement

ಇತ್ತೀಚೆಗೆ ನಿಶ್ಚಿತಾರ್ಥವಾಗಿರುವ ಹುಡುಗ, ಹುಡುಗಿ ಜೊತೆಗೆ ಹುಡುಗಿಯ ತಂಗಿ ದೇವಾಲಯಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ಮೂವರೂ ಗಂಭೀರವಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಚೇಳೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next