Advertisement

ಚಿಕ್ಕಬಳ್ಳಾಪುರ : ಮಳೆಯ ಆರ್ಭಟ, ನಂದಿಗಿರಿ ಧಾಮದಲ್ಲಿ ಗುಡ್ಡ ಕುಸಿತ : ರಸ್ತೆ ಬಂದ್

01:34 PM Aug 25, 2021 | Team Udayavani |

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿನ್ನೆ (ಮಂಗಳವಾರ, ಆಗಸ್ಟ್ 24) ರಾತ್ರಿ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದರಲ್ಲದೆ ವಿಶ್ವ ವಿಖ್ಯಾತ ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಮಣ್ಣುಗುಡ್ಡ ಕುಸಿದು ಸುಮಾರು 10 ಅಡಿ ಆಳಕ್ಕೆ ಮುಖ್ಯ ರಸ್ತೆ ಕುಸಿದು ಸಂಪೂರ್ಣವಾಗಿ ಮುಚ್ಚಿಹೋಗಿದೆ.

Advertisement

ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ರಸ್ತೆಗೆ ಅಡ್ಡಲಾಗಿ ಬಂಡೆಗಳು ಉರುಳಿ ನಿಂತಿವೆ. ರಸ್ತೆ ಬಂದ್ ಆಗಿದ್ದರಿಂದ ನಂದಿಬೆಟ್ಟಕ್ಕೆ ಬಂದಿರುವ ಪ್ರವಾಸಿಗರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಾಪಸ್ ಕಳುಹಿಸಲಾಗುತ್ತಿದೆ.

ಇದನ್ನೂ ಓದಿ : ಡಬಲ್ ಡೋಸ್ ವ್ಯಾಕ್ಸಿನ್ ಪಡೆದಿದ್ದರೂ ಮಾಜಾಳಿ ಚೆಕ್‍ ಪೋಸ್ಟ್ ನಲ್ಲಿ ತಡೆ : ಆಕ್ರೋಶ

ಮಂಗಳವಾರ ರಾತ್ರಿ ನಂದಿಬೆಟ್ಟದ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಮೇಲ್ಭಾಗದಿಂದ ಮಣ್ಣು ಕೊಚ್ಚಿಕೊಂಡು ಬಂದಿದೆ. ಮಳೆಯ ನೀರಿನ ಜೊತೆ ಮಣ್ಣು, ಬೃಹತ್ ಬಂಡೆ, ಮರ ಗಿಡಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಇನ್ನೂ ವಿದ್ಯುತ್ ಕಂಬಗಳು ಧರೆಗೆ ಉಳಿದಿರುವ ಕಾರಣ ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ನಂದಿಬೆಟ್ಟದ ಚೆಕ್ ಪೋಸ್ಟ್ ನ ಸ್ವಲ್ಪ ದೂರದಲ್ಲೇ ರಸ್ತೆಗೆ ಅಡ್ಡಲಾಗಿ ಮಣ್ಣು ಶೇಖರಣೆಯಾಗಿದ್ದರಿಂದ, ಮೊದಲೇ ರೆಸಾರ್ಟ್ ಬುಕ್ ಮಾಡಿಕೊಂಡು ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಮೇಲ್ಭಾಗದಲ್ಲಿಯೇ ಸಿಲುಕಿಕೊಂಡಿದ್ದಾರೆ.

Advertisement

ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಮಣ್ಣು ತೆರವು ಕೆಲಸದಲ್ಲಿ ನಿರತರಾಗಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಭೂ ಕುಸಿತವಾಗಿರೋದು. ಮಲೆನಾಡು ಭಾಗದಲ್ಲಿ ಕಾಣಿಸುತ್ತಿದ್ದ ದೃಶ್ಯಗಳನ್ನ ತಮ್ಮಲ್ಲಿ ಆಗಿರೋದನ್ನು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.

ಕರೆ-ಕುಂಟೆಗಳು ಭರ್ತಿ: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಒಂದು ಕಡೆ ನಂದಿಗಿರಿಧಾಮದಲ್ಲಿ ಭೂ ಕುಸಿತ ಕಂಡು ಬಂದರೇ ಮತ್ತೊಂದಡೆ ಗ್ರಾಮೀಣ ಪ್ರದೇಶದಲ್ಲಿ ನಿರ್ಮಿಸಿರುವ ಕೆರೆ-ಕುಂಟೆಗಳು ಭರ್ತಿಯಾಗಿ ಗಮನಸೆಳೆಯುತ್ತಿದೆ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಗೋಪಾಲ್ ಎಂಬುವರ ರೇಷ್ಮೆ ಬೆಳೆಗಾರರನ ಮನೆಗೆ ನೀರು ನುಗ್ಗಿ ರೇಷ್ಮೆ ಹುಳುಗಳು ನೀರು ಪಾಲಾಗಿ ಅಪಾರ ನಷ್ಟ ಸಂಭವಿಸಿದೆ.

ಇದನ್ನೂ ಓದಿ : ಎಚ್ಚರ 2022ರಲ್ಲೂ ಮತ್ತಷ್ಟು ಸಂಕಷ್ಟ…ಡೆಲ್ಟಾಗಿಂತಲೂ ಕೋವಿಡ್ 22 ಹೆಚ್ಚು ಅಪಾಯಕಾರಿ!

Advertisement

Udayavani is now on Telegram. Click here to join our channel and stay updated with the latest news.

Next