Advertisement

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ:ನಾಮಪತ್ರ ಸಲ್ಲಿಕೆ ಶುರು

02:54 PM Sep 23, 2019 | Sriram |

ಚಿಕ್ಕಬಳ್ಳಾಪುರ: ಅತ್ತ ಅರ್ನಹ ಶಾಸಕರ ಪ್ರಕರಣವನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡುತ್ತಿದ್ದಂತೆ ಇತ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಪ್ರಕ್ರಿಯೆಗಳು ಶುರುವಾಗಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

Advertisement

ಚಿಕ್ಕಬಳ್ಳಾಪುರ ಕ್ಷೇತ್ರದ ಚುನಾವಣಾ ಅಧಿಕಾರಿಗಳಾದ ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಗೆ ಕೇಶವರೆಡ್ಡಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಇವರೊಂದಿಗೆ ಯುವ ಮುಖಂಡ ಅಡ್ಡಗಲ್ ಶ್ರೀಧರ್ ಸಹ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಾಯಕರ ಜೊತಗೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕೇಶವರೆಡ್ಡಿ ಪ್ರಚಾರವನ್ನು ಅರ್ಧಕ್ಕೆ ಮೊಟಕುಗೊಳಿಸಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಸೂಚನೆ ಮೇರೆಗೆ ಕೇಶವರೆಡ್ಡಿ ನಾಮಪತ್ರ ಸಲ್ಲಿಸಿದರೆಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next