Advertisement

ಚಿಕ್ಕಬಳ್ಳಾಪುರ: ಕಾರು ಪಲ್ಟಿ; ತಾಯಿ ಮಗ ಸಾವು

09:22 AM Nov 09, 2019 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ‌ ತಾಲೂಕಿನಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿರುವ ಕ್ಯಾಂಟರ್‌ಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 7 ರ ಯರ್ರಲಕ್ಕೇನಹಳ್ಳಿ ಕ್ರಾಸ್‌ನಲ್ಲಿ ನಡೆದಿದೆ.

Advertisement

ಮೃತರನ್ನು ಬಾಗೇಪಲ್ಲಿ ಪಟ್ಟಣದ ವೆಂಕಟರವಣಪ್ಪ(65), ಅಂಜಿನಮ್ಮ(85) ಎಂದು ಗುರುತಿಸಲಾಗಿದೆ.

ವೆಂಕಟರವಣಪ್ಪ ತನ್ನ ಕಾರಿನಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ತನ್ನ ಮಗನನ್ನು ನೋಡಿಕೊಂಡು ಬರಲು ಹೋಗಿದ್ದು, ಮಗನನ್ನು ನೋಡಿಕೊಂಡು ಮತ್ತೆ ಬಾಗೇಪಲ್ಲಿಗೆ ಮನೆಗೆ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next