Advertisement

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಸಲು ಸಹಕರಿಸಿ: ನವೀನ್‍ರಾಜ್

09:42 PM Dec 16, 2020 | mahesh |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶಾಂತಿಯುತವಾಗಿ ನಡೆಸಲು ಎಲ್ಲರು ಸಹಕರಿಸಬೇಕೆಂದು ಬೆಂಗಳೂರು ಪ್ರಾದೇಶಿಕ ಆಯುಕ್ತ ನವೀನ್‍ರಾಜ್ ಸಿಂಗ್ ತಿಳಿಸಿದರು.

Advertisement

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅಭ್ಯರ್ಥಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಜನ ನಿರ್ಭಿತಿಯಿಂದ ಮತದಾನ ಮಾಡುವ ಮೂಲಕ ತಮಗೆ ನೆಚ್ಚಿನ ಅಭ್ಯರ್ಥಿಗಳನ್ನು ಆರಿಸಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ,ಜಿಪಂ ಸಿಇಒ ಪಿ.ಶಿವಶಂಕರ್,ಜಿಲ್ಲಾ ಎಸ್ಪಿ ಮಿಥುನ್ ಕುಮಾರ್,ಉಪ ವಿಭಾಗಾಧಿಕಾರಿ ರಘುನಂದನ್,ತಾಪಂ ಇಒ ಚಂದ್ರಕಾಂತ್,ಹಂಡಿಗನಾಳ ಪಿಡಿಒ ರಂಜನ್‍ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next