Advertisement

ಬೋದಗೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಚಾಲನೆ

01:06 PM Feb 20, 2021 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಹಮ್ಮಿಕೊಂಡಿರುವ ‘ಜಿಲ್ಲಾಡಳಿತದ ನಡೆ ಗ್ರಾಮಗಳ ಕಡೆ’ ಗ್ರಾಮ ವಾಸ್ತವ್ಯಕ್ಕೆ ಜಿಲ್ಲಾಧಿಕಾರಿಗಳ ಆರ್.ಲತಾ ಅವರು ಶನಿವಾರ ಚಾಲನೆ ನೀಡಿದರು.

Advertisement

ಗ್ರಾಮದ ಸರಕಾರಿ ಪ್ರಾಥಮಿಕ ಆವರಣದಲ್ಲಿ ಗಿಡ ನೆಟ್ಟು, ನಂತರ ಗ್ರಾಮದಲ್ಲಿನ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಗ್ರಾಮ ವಾಸ್ತವ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದ ಅವರು, ನಂತರ ಗ್ರಾಮದಲ್ಲಿ ಸಂಚರಿಸಿ, ಸ್ಥಳೀಯ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಇದನ್ನೂ ಓದಿ:ಬೊಮ್ಮನಜೋಗಿ ಹಳ್ಳಿ ಮಕ್ಕಳಿಗೆ ಮೇಸ್ಟ್ರಾದ ವಿಜಯಪುರ ಜಿಲ್ಲಾಧಿಕಾರಿ

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್, ತಹಶೀಲ್ದಾರ್ ಬಿಎಸ್ ರಾಜೀವ್, ಯುವ ಮುಖಂಡ ಸಂತೋಷ ಬೆಲೂಟಿ,  ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next