Advertisement

Chikkaballapur; ಪಾಂಡವರ ಬಗ್ಗೆ ಅವಹೇಳನಕಾರಿ ಪೋಸ್ಟ್: ದೂರು ದಾಖಲು

10:24 PM Dec 31, 2023 | Team Udayavani |

ಚಿಕ್ಕಬಳ್ಳಾಪುರ: ದ್ರೌಪದಿ ಮತ್ತು ಪಾಂಡವರ ಸಂಬಂಧದ ಬಗ್ಗೆ ಅವಹೇಳನಕಾರಿಯಾಗಿ ಜಾಲತಾಣದಲ್ಲಿ ಬರಹ ಪ್ರಕಟಿಸಿದ್ದಾರೆಂದು ಆರೋಪಿಸಿ ಜಿಲ್ಲೆಯ ಮಂಚೇನಹಳ್ಳಿ ತಾಲ್ಲೂಕಿನ ಪಿಡಚಲಹಳ್ಳಿ ಗ್ರಾಮದ ನಿವಾಸಿ ನಾಗರಾಜು ಎಂಬುವರ ವಿರುದ್ಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Advertisement

‘ನಾವು ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗುವ ಚಿತ್ರಗಳು ಮತ್ತು ವಿಷಯಗಳ ಮೇಲೆ ಗಮನ ಹರಿಸುತ್ತಿದ್ದೇವೆ. ನಾಗರಾಜ್.ಪಿ.ಎನ್. ರಾವಣಾಸುರ ಎಂಬುವವರು ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶುಕ್ರವಾರ ಸಂಜೆ, ದ್ರೌಪದಿಯು ಪಂಚಪಾಂಡವರ ಜತೆಯಲ್ಲಿ ಮಲಗಿರುವ ಚಿತ್ರವನ್ನು ಪ್ರಕಟಿಸಿದ್ದರು. ‘ಮೊದಲ ಸರದಿ ಮುಗಿಸಿಕೊಂಡು ಎರಡನೇ ಸರದಿಗಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ’ ಎಂದು ಅವಹೇಳನವಾಗಿ ಬರೆದಿದ್ದರು.

ಇದು ಧಾರ್ಮಿಕ ನಂಬಿಕೆ ಹಾಗೂ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಮಂಚೇನಹಳ್ಳಿ ಪೊಲೀಸ್ ಠಾಣೆಯ ಸಾಮಾಜಿಕ ಜಾಲತಾಣಗಳ ಮೇಲಿನ ನಿಗಾ ಘಟಕದ ಸಿಬಂದಿ ಎ.ಆರ್.ಗೋಪಾಲ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next