Advertisement

Chikkaballapur ಸ್ಪರ್ಧಿಸಲು ನನ್ನ ಪುತ್ರನಿಂದ ಕ್ಷೇತ್ರ ಪ್ರವಾಸ: ವಿಶ್ವನಾಥ್‌

09:38 PM Feb 27, 2024 | Team Udayavani |

ಗುಡಿಬಂಡೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಯಾಗಿದ್ದಾನೆ ಎಂದು ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌ ತಿಳಿಸಿದರು.

Advertisement

ತಾಲೂಕಿನ ಎಲ್ಲೋಡು ಗ್ರಾಮದ ಶ್ರೀ ಲಕ್ಷ್ಮೀಆದಿನಾರಾಯಣಸ್ವಾಮಿ ಜಾತ್ರೆಯಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಮಗ ಅಲೋಕ್‌ ವಿಶ್ವನಾಥ್‌ ನನ್ನೊಂದಿಗೆ ರಾಜಕೀಯದಲ್ಲಿ ಬರಬೇಕೆಂದು ಅಭಿಲಾಷೆ ಹೊಂದಿದ್ದು, ಈಗಾಗಲೇ ಕ್ಷೇತ್ರಾದ್ಯಂತ ಪ್ರವಾಸ ಮಾಡುತ್ತಾ ಸಂಪೂರ್ಣ ವಿವರ ಪಡೆಯುತ್ತಿದ್ದಾರೆ.

ಸಂಸದ ಬಚ್ಚೇಗೌಡ ರಾಜಕೀಯ ನಿವೃತ್ತಿ ಘೋಷಿಸಿರುವುದರಿಂದ ಈ ಬಾರಿ ಮಗನಿಗೆ ಟಿಕೆಟ್‌ ಕೇಳಲಾಗಿದೆ. ಕ್ಷೇತ್ರದಲ್ಲಿ ಹಲವರು ಆಕಾಂಕ್ಷಿಗಳಿದ್ದು, ವರಿಷ್ಠರು ಯಾರಿಗೆ ಟಿಕೆಟ್‌ ನೀಡಿದರೂ ಒಗ್ಗೂಡಿ ಬಿಜೆಪಿ ಗೆಲ್ಲಿಸಲು ಶ್ರಮಿಸುತ್ತೇವೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next