Advertisement

ಚಿಕ್ಕಬಳ್ಳಾಪುರದಲ್ಲಿ ಪಕ್ಷಾಂತರ ಪರ್ವ: ತೆನೆ ಇಳಿಸಿ ಕೈ ಹಿಡಿದ ನಾಯಕರು

09:00 PM Sep 18, 2019 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸುಧಾಕರ್ ರಾಜೀನಾಮೆ ಬಳಿಕ ಕ್ಷೇತ್ರದಲ್ಲಿ ಉಪ ಚುನಾವಣೆ ಕಾರ್ಮೋಡ ಆವರಿಸಿದ್ದು ಪಕ್ಷಾಂತರ ಪರ್ವ ಶುರುವಾಗಿದೆ.

Advertisement

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಿತ್ರ ಪಕ್ಷವಾದ ಜೆಡಿಎಸ್ ಮುಖಂಡರೇ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ವಿಶೇಷ.

ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಂಜೆ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಪಂ ಮಾಜಿ ಅಧ್ಯಕ್ಷ ಪಿ.ಎನ್.ಮುನೇಗೌಡ, ನಾರಾಯಣಸ್ವಾಮಿ ಹಾಗೂ  ನೂರಾರು ಬೆಂಬಲಿಗರು ಪಕ್ಷ ತೊರೆದು ಕೈ ಹಿಡಿದಿರುವುದು ಜೆಡಿಎಸ್ ಗೆ ತೀವ್ರ ಅಘಾತ ತಂದಿದೆ.

ಸೇರ್ಪಡೆ ವೇಳೆ ಮಾಜಿ ಸಚಿವ ಶಿವಶಂಕರರೆಡ್ಡಿ, ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವ ರೆಡ್ಡಿ, ಮುಖಂಡರಾದ ಎಸ್.ಪಿ.ಶ್ರೀನಿವಾಸ, ಅಡ್ಡಗಲ್ ಶ್ರೀಧರ್, ಇಸ್ಮಾಯಿಲ್, ಯಲುವಹಳ್ಳಿ ರಮೇಶ್ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next