Advertisement

Chikkaballapur: ಹಾಲಿನ ದರ ಕಡಿತಗೊಳಿಸಿರುವ ಕೋಚಿಮುಲ್ ವಿರುದ್ದ ಉಪವಾಸ ಸತ್ಯಾಗ್ರಹ

11:54 AM Jul 10, 2024 | Team Udayavani |

ಚಿಕ್ಕಬಳ್ಳಾಪುರ: ಹಾಲಿನ ದರ ಕಡಿತಗೊಳಿಸಿರುವ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಧೋರಣೆ ಖಂಡಿಸಿ ಸಂಸದ ಡಾ.ಕೆ.ಸುಧಾಕರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಡೀಸಿ ಕಚೇರಿ ಬಳಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಬಿಜೆಪಿ ಕಾರ್ಯಕರ್ತರು ನಡೆಸಿದರು.

Advertisement

ಕೋಚಿಮುಲ್ ಕಡಿತಗೊಳಿಸಿರುವ ಹಾಲಿನ ದರ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು. ಅಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕವಾಗಿದ್ದ  ಹಾಲು ಒಕ್ಕೂಟವನ್ನು ಮತ್ತೆ ಜಿಲ್ಲೆಗೆ ವಾಪಸ್ಸು ನೀಡಬೇಕೆಂದು ಪ್ರತಿಭಟನೆ ವೇಳೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ  ಮಾಜಿ ಶಾಸಕರಾದ ಜೆ.ಕೆ.ಕೃಷ್ಣಾರೆಡ್ಡಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ, ಜೆಡಿ ಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ, ಮುಖಂಡರಾದ ಕೆ.ವಿ.ನಾಗರಾಜ್,  ಸೀಕಲ್ ರಾಮಚಂದ್ರಗೌಡ, ಮರಳುಕುಂಟೆ ಕೃಷ್ಣಮೂರ್ತಿ, ಪಿ.ಎನ್.ಕೇಶವರೆಡ್ಡಿ, ಆರ್.ಮಟಮಪ್ಪ, ಕಾಳೇಗೌಡ, ರವಿನಾರಾಯಣರೆಡ್ಡಿ,  ಕೆ.ಆರ್.ರೆಡ್ಡಿ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next