Advertisement

ಚಿಕ್ಕಬಳ್ಳಾಪುರ ಡಿವೈಎಸ್ಪಿ ರವಿಶಂಕರ್ ವರ್ಗಾವಣೆ : ವಿ.ಕೆ.ವಾಸುದೇವ್ ನೂತನ ಡಿವೈಎಸ್ಪಿ

10:17 PM Jul 24, 2021 | Team Udayavani |

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಉಪವಿಭಾಗದ ಡಿವೈಎಸ್ಪಿಯಾಗಿ ಉತ್ತಮವಾಗಿ ಸೇವೆ ಸಲ್ಲಿಸಿದ ಕೆ.ರವಿಶಂಕರ್ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಬೆಂಗಳೂರಿನ ಪೋಲಿಸ್ ಪ್ರಧಾನ ಕಚೇರಿಯಲ್ಲಿ ಅಪರಾಧ ವಿಭಾಗದ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿ.ಕೆ.ವಾಸುದೇವ್ ಅವರನ್ನು ನೂತನ ಡಿವೈಎಸ್ಪಿಯಾಗಿ ನೇಮಕ ಮಾಡಲಾಗಿದೆ.

Advertisement

ಚಿಕ್ಕಬಳ್ಳಾಪುರ ಉಪವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ರವಿಶಂಕರ್ ಅವರನ್ನು ಬೆಂಗಳೂರಿನ ಪೋಲಿಸ್ ಪ್ರಧಾನ ಕಚೇರಿಯಲ್ಲಿ ಅಪರಾಧ ವಿಭಾಗದ ಡಿವೈಎಸ್ಪಿಯಾಗಿ ವರ್ಗಾಯಿಸಲಾಗಿದೆ ಇತ್ತೀಚಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ನೆರೆಯ ಆಂಧ್ರಪ್ರದೇಶದ ಡಿವೈಎಸ್ಪಿ ಸಹಿತ ಪೋಲಿಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಡಿವೈಎಸ್ಪಿ ಕೆ.ರವಿಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ :ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೀರಾ ಬಾಯ್‌ ಚಾನುಗೆ ಸ್ಪೀಕರ್‌ ಕಾಗೇರಿ ಅಭಿನಂದನೆ

ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ಕಾರ್ಯಚರಣೆ ನಡೆಸಿರುವ ಹಿನ್ನೆಲೆಯಲ್ಲಿ ಡಿವೈಎಸ್ಪಿ ವಿ.ಕೆ.ವಾಸುದೇವ್ ಅವರ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ನೀಡಿ ಗೌರವಿಸಿದೆ ಅನೇಕ ಪ್ರಕರಣಗಳನ್ನು ಪತ್ತೆಹಚ್ಚಿ ಖಡಕ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ವಿ.ಕೆ.ವಾಸುದೇವ್ ಅವರು ಚಿಕ್ಕಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ನೇಮಕಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next