Advertisement

Chikkaballapur: ನಮ್ಮ ಇಬ್ಬರು ಜೆಡಿಎಸ್ ಸದಸ್ಯರು ನಮಗೆ ಕಾಣುತ್ತಿಲ್ಲ

03:53 PM Sep 11, 2024 | Team Udayavani |

; ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಗುರುವಾರ ನಡೆಯಲಿದೆ. ಆದರೆ ಜೆಡಿಎಸ್ ಪಕ್ಷದಿಂದ ಗೆದ್ದ ಇಬ್ಬರು ಸದಸ್ಯರು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಜೆಡಿ ಎಸ್ ಜಿಲ್ಲಾ ಅಧ್ಯಕ್ಷ ಮುಕ್ತ ಮುನಿಯಪ್ಪ ತಮ್ಮ ಅಳಲು ತೋಡಿಕೊಂಡರು.

Advertisement

ನಗರದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅವರು ಯಾವೋದೋ ಒತ್ತಡಕ್ಕೆ ಮಣಿದು ಎಲ್ಲ ಇದ್ದಾರೆ ಗೊತ್ತಾಗುತ್ತಿಲ್ಲ ಎಂದರು.

ಅವರು ಎಲ್ಲಿಯೆ ಇರಲಿ, ಬಿಜೆಪಿ, ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಗಳಿಗೆ ನಗರಸಭಾ ಚುನಾವಣೆಯಲ್ಲಿ ಮತ ಹಾಕುತ್ತಾರೆಂಬ ವಿಶ್ವಾಸ ಇದೆ ಎಂದ ಅವರು, ನಮ್ಮ ಜೆಡಿಎಸ್ ಪಕ್ಷದ ಸದಸ್ಯರಾದ ಆರ್.ಮಟಮಪ್ಪ‌ ಹಾಗೂ ವೀಣಾ ರಾಮು ಅವರು ಸಾಕಷ್ಡು ಬಾರಿ ಕಾಂಗ್ರೆಸ್ ವಿರುದ್ದ ಮಾತನಾಡಿದ್ದಾರೆ. ಆದ್ದರಿಂದ ಈಗಲೇ ಎನ್ ಡಿ ಎ ಅಭ್ಯರ್ಥಿಗಳ ಪರವಾಗಿ ಇಬ್ಬರು ಮತ ಚಲಾಯಿಸುವ ವಿಶ್ವಾಸ ಇದೆ. ಆದರೆ ಮೂರು ದಿನದಿಂದ ಅವರು ಸಂಪರ್ಕದಲ್ಲಿ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next