Advertisement

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಮಹಿಳೆ ಮತ್ತು ಬಾಲಕ ಸಾವು

08:40 PM Dec 11, 2020 | mahesh |

ಚಿಕ್ಕಬಳ್ಳಾಪುರ/ಚಿಂತಾಮಣಿ: ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಕೋಟಗಲ್ ಗ್ರಾಮದ ಕೆರೆಯಲ್ಲಿ ಬಟ್ಟೆ ಒಗೆಯಲು ಹೋಗಿ ಮಹಿಳೆ ಮತ್ತು ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.

Advertisement

ಕೋಟಗಲ್ ಗ್ರಾಮದ ಅನಿತಾ (25) ಹಾಗೂ ಗಗನ್ (10) ಮೃತಪಟ್ಟವರು.

ಶುಕ್ರವಾರ ಕೆರೆಯಲ್ಲಿ ಅನಿತಾ ಬಟ್ಟೆ ಒಗೆಯುತ್ತಿದ್ದ ವೇಳೆ ಬಾಲಕ ಕಾಲು ಜಾರಿ ನೀರಿನಲ್ಲಿ ಬಿದಿದ್ದು, ರಕ್ಷಣೆ ಮಾಡಲು ಹೋದ ಮಹಿಳೆ ಕೂಡ ನೀರಿನಲ್ಲಿ ಬಿದ್ದು ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲಿಸರು ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಕಾರದಿಂದ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ.

ಚಿಂತಾಮಣಿ ಕ್ಷೇತ್ರದ ಶಾಸಕ ಜೆಕೆ ಕೃಷ್ಣಾರೆಡ್ಡಿ ಕೋಟಗಲ್ ಗ್ರಾಮಕ್ಕೆ ಬೇಟಿ ನೀಡಿ ಮೃತರ ಸಂಬಂದಿಕರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next