Advertisement

Road Mishap: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಮಗು ಸೇರಿ 13 ಮಂದಿ ಮೃತ್ಯು

09:46 AM Oct 26, 2023 | Team Udayavani |

ಚಿಕ್ಕಬಳ್ಳಾಪುರ: ಟಾಟಾ ಸುಮೊ‌ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 13 ಮಂದಿ ಮೃತಪಟ್ಟ ಘಟನೆ ನಗರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆ.26ರ ಗುರುವಾರ  ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ.

Advertisement

9 ಮಹಿಳೆಯರು ಹಾಗೂ ಗಂಡು ಮಗು ಸೇರಿ ನಾಲ್ಕು‌ ಜನ ಪುರುಷರು ಪುರುಷರು ಮೃತಪಟ್ಟವರಾಗಿದ್ದಾರೆ. ಮೃತಪಟ್ಟವರು ಆಂದ್ರದ ಅನಂತಪುರ ಜಿಲ್ಲೆಯ ಗೋರಂಟ್ಲ ವ್ಯಾಪ್ತಿಗೆ ಸೇರಿದ ಕೊತ್ತಚೆರುವು ಕಡೆಯವರು ಎಂಬ ಮಾಹಿತಿ ಲಭಿಸಿದೆ. ಇವರೆಲ್ಲರೂ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.

ಆಂದ್ರ ಮೂಲದ ಟಾಟಾ ಸುಮೊ ವಾಹನಕ್ಕೆ ಅಪಘಾತವಾಗಿದ್ದು, ಮೃತರ ಬಗ್ಗೆ ಸ್ಪಷ್ಟ ಮಾಹಿತಿ ತನಿಖೆ ನಂತರ ತಿಳಿಯಲಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಂಚರ್ ಆಗಿ ನಿಂತಿದ್ದ ಕಂಟೈನರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ‌ಎಸ್.ಪಿ. ನಾಗೇಶ್ ತಿಳಿಸಿದರು.

ಚಿಕ್ಕಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂದ್ರದಿಂದ ಬೆಂಗಳೂರಿಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದರು.

Advertisement

ಗಾಯಳುಗಳಿಗೆ ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ಲಭಿಸಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next