Advertisement

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ವರ್ಗಾವಣೆಯನ್ನು ವಿರೋಧಿಸಿ ನಡೆಸಿದ ಬಂದ್ ವಿಫಲ

01:12 PM Aug 16, 2019 | keerthan |

ಚಿಕ್ಕಬಳ್ಳಾಪುರ : ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ವರ್ಗಾವಣೆಯನ್ನು ಖಂಡಿಸಿ ರೈತಪರ ಮತ್ತು ಕನ್ನಡ ಪರ ಸಂಘಟನಗೆಳು ಕರೆನೀಡಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಬಂದ್ ವಿಫಲವಾಗಿದೆ.

Advertisement

ಬೆಳ್ಳಂಬೆಳಗ್ಗೆ ಬಂದ್ ಆಚರಿಸಲು ರಸ್ತೆಗಿಳಿದ 50 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದು, ಮುಂಜಾಗೃತಾ ಕ್ರಮವಾಗಿ ಜಿಲ್ಲಾ ಕೇಂದ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ವರ್ಗಾವಣೆಯಾಗಿ ಬಂದ ಒಂದು ವರುಷದಲ್ಲಿಯೇ ಮತ್ತೆ ಬೇರೆಡೆಗೆ ವರ್ಗಾಯಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇತ್ತೀಚಿಗೆ ರೈತರು ಮತ್ತು ನಾಗರಿಕರು ಹೆದ್ದಾರಿ ತಡೆದು ಪ್ರತಿಭಟನೆಯನ್ನೂ ಕೂಡ ನಡೆಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next