Advertisement

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

12:52 PM Sep 26, 2024 | Team Udayavani |

ಚಿಕ್ಕಬಳ್ಳಾಪುರ: ಶಿಕ್ಷಣದ‌ ಸಾರ್ವತ್ರಿಕ, ಸಮಾನತೆ ಹಾಗೂ ಸೌಹಾರ್ದತೆಗಾಗಿ ಆಗ್ರಹಿಸಿ ಚಿಕ್ಕಬಳ್ಳಾಪುರದಲ್ಲಿ ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನಕ್ಕೆ ಚಾಲನೆ ಸಿಕ್ಕಿದೆ.

Advertisement

ಸಮ್ಮೇಳನದ ಭಾಗವಾಗಿ ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿರುವ ವಿದ್ಯಾರ್ಥಿಗಳು ನಗರದ ಮುಖ್ಯ ರಸ್ತೆಗಳಲ್ಲಿ ಬೃಹತ್ ಮೆರವಣೆಗೆ ನಡೆಸಿದರು

ಬಳಿಕ ನಗರದ ಕೆಇಬಿ ಸಮುದಾಯ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಮಾವೇಶವನ್ನು ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಖ್ಯಾತ ಸಾಹಿತಿ ಗೊಲ್ಲಹಳ್ಳಿ ಶಿವ ಪ್ರಸಾದ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಚಾಲನೆ ನೀಡಿದರು.

ಸಮ್ಮೇಳನದಲ್ಲಿ ಎಸ್ ಎಫ್ಐ ರಾಷ್ಟ್ರೀಯ ಅಧ್ಯಕ್ಷ ವಿ.ಪಿ.ಸಾನು, ರಾಜ್ಯಾಧ್ಯಕ್ಷ ಅಮರೇಶ್, ರಾಜ್ಯ ಕಾರ್ಯದರ್ಶಿ ಭೀಮನಗೌಡ, ಜಿಲ್ಲಾ ಅಧ್ಯಕ್ಷ ಸೋಮಶೇಖರ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next