Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಸಿಡಿಲು ಬಡಿದು ಮಹಿಳೆ ಸಾವು

07:13 PM Apr 14, 2021 | Team Udayavani |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತ ಗೊಂಡಿತು.

Advertisement

ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮದಲ್ಲಿ ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಾಗಮ್ಮ ಮೃತಪಟ್ಟಿದ್ದಾಳೆ ಆಕೆಯೊಂದಿಗೆ ಜೊತೆಯಲ್ಲಿದ್ದ ಅರುಣ ಎಂಬುವರು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಬಳ್ಳಾಪುರ ನಗರದಲ್ಲಿ ಸಂಜೆ ಸುರಿದ ಮಳೆಯಿಂದಾಗಿ ಚರಂಡಿ ನೀರು ಸರಾಗವಾಗಿ ಹರಿಯದಿದ್ದರಿಂದ ಕೊಳಚೆ ನೀರು ರಸ್ತೆಯಲ್ಲಿ ಹರಿದು ವಾಹನ ಸವಾರರು ಪರದಾಡುವ ದೃಶ್ಯ ಸಾಮಾನ್ಯವಾಗಿ ಕಂಡುಬಂದಿತು ನಗರದ ಶ್ರೀ ಮಹಾಕಾಳಿ ದೇವಾಲಯ ಮುಂಭಾಗ ಮಳೆ ನೀರು ನಿಂತಿದ್ದನ್ನು ಅರಿತು ಸಮಾಜ ಸೇವಕ ಮಹಾಕಾಳಿ ಬಾಬು ರಸ್ತೆಯಲ್ಲಿ ನಿಂತಿದ್ದ ನೀರು ಸರಾಗ ಹರಿಯಲು ವ್ಯವಸ್ಥೆ ಮಾಡಿದರು.

ಇದನ್ನೂ ಓದಿ :

ಚಿಕ್ಕಬಳ್ಳಾಪುರ ಗೌರಿಬಿದನೂರು ಮಾರ್ಗ ಮಧ್ಯೆ ಮಳೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲಿ ಹರಿದಿದ್ದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಮಳೆಯ ಪ್ರಭಾವದಿಂದ ಮೂರು ಹೋಬಳಿಗಳಲ್ಲಿ ಯಾವುದೇ ರೀತಿಯ ನಷ್ಟ ಸಂಭವಿಸುವ ವರದಿಗಳು ಬಂದಿಲ್ಲ ಎಂದು ತಹಸಿಲ್ದಾರ್ ತುಳಸಿ ಉದಯವಾಣಿಗೆ ತಿಳಿಸಿದ್ದಾರೆ.

Advertisement

ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮಕ್ಕೆ ತಹಸಿಲ್ದಾರ್ ಬಿಎಸ್ ರಾಜು ಮತ್ತು ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next