Advertisement

ಅನಾರೋಗ್ಯ : ಮನನೊಂದ ಯುವಕ ಕಂದವಾರ ಕೆರೆಗೆ ಹಾರಿ ಆತ್ಮಹತ್ಯೆ

09:30 PM Mar 01, 2021 | Team Udayavani |

ಚಿಕ್ಕಬಳ್ಳಾಪುರ : ಅನಾರೋಗ್ಯದಿಂದ ಬಳಲುತ್ತಿದ್ದ ವಿವಾಹಿತ ಯುವಕನೊಬ್ಬ ಕಂದವಾರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

Advertisement

ನಗರದ ದರ್ಗಾ ಮೊಹಲ್ಲಾದ ನಿವಾಸಿ ಮುಸ್ತಫಾ ಬಿನ್ ದಸ್ತಗೀರ್ ಆತ್ಮಹತ್ಯೆಗೆ ಶರಣಾದ ನತದೃಷ್ಠ ಯುವಕ ಎದೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮುಸ್ತಫಾ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಸಹೋದರಿಯನ್ನು ಉದ್ದೇಶಿಸಿ ವೀಡಿಯೋ ಮಾಡಿ ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ನನ್ನಿಂದ ಏನಾದರೂ ತಪ್ಪಾಗಿದ್ದರೆ ದಯಮಾಡಿ ಕ್ಷಮಿಸಿ ಎಂದಿದ್ದಾನೆ.

ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಮುಸ್ತಫ ನಗರದಲ್ಲಿ ಎಲ್ಲರಿಗೆ ಚಿರಪರಿಚಿತರಾಗಿದ್ದ ಆತ ನಗರದ ಕಂದವಾರ ಕೆರೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎಂಬ ಸುದ್ದಿ ಹರಡುತ್ತಿದ್ದಂತೆಯೆ ಆತನ ಬಂಧುಬಳಗ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ನಾಗರಿಕರು ಕೆರೆಯತ್ತ ದೌಡಾಯಿಸಿದರು ಅಗ್ನಿಶಾಮಕದಳ ಸಿಬ್ಬಂದಿಯ ಸಹಕಾರದಿಂದ ಶವ ಹೊರ ತೆಗೆದಿದ್ದಾರೆ.

ತಾಯಿ,ಪತ್ನಿ,ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾನೆ.

ಇದನ್ನೂ ಓದಿ:72ರ ವೃದ್ಧನ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ: ಕಾನೂನು ಸಲಹೆ ಪಡೆಯಲು ಹೈಕೋರ್ಟ್‌ ಸೂಚನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next