Advertisement

ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ 8 ಕೆಜಿ ಗುಟ್ಕಾ-ಸಿಗರೇಟ್ ವಶ

09:29 PM Jan 13, 2021 | Team Udayavani |

ಚಿಕ್ಕಬಳ್ಳಾಪುರ : ಜಿಲ್ಲಾ ಕಾರಾಗೃಹದ ಮೇಲೆ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿ ಜೈಲಿನಲ್ಲಿ ಬೀಡಿ-ಸಿಗರೇಟ್, ಪಾನ್‍ಪರಾಗ್ ಗುಟ್ಕಾ ಇನ್ನಿತರೆ ಸುಮಾರು 8 ಕೆಜಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಜಿಲ್ಲಾ ಎಸ್ಪಿ ಅವರೊಂದಿಗೆ ಡಿವೈಎಸ್ಪಿ ಕೆ.ರವಿಶಂಕರ್ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳ ತಂಡ ಕಾರಾಗೃಹದ ಮೇಲೆ ದಾಳಿ ನಡೆಸಿ ಜೈಲಿನಲ್ಲಿ ಬೀಡಿ-ಸಿಗರೇಟ್ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡು ಮಹಜರು ನಡೆಸಿ ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ ಜಿಲ್ಲಾ ಕಾರಾಗೃಹ ಖೈದಿಗಳಿಗೆ ಮೋಜು ಮಸ್ತಿ ಮಾಡಲು ಕೇಂದ್ರವಾಗಿ ಮಾರ್ಪಾಟಿದೆಯೆಂದು ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ಪೋಲಿಸರು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಶಿರಾಡಿ ಘಾಟಿಯಲ್ಲಿ ಖ್ಯಾತ ತುಳು ಚಿತ್ರ ನಟ ರೂಪೇಶ್ ಶೆಟ್ಟಿ ಕಾರು ಅಪಘಾತ

Advertisement

Udayavani is now on Telegram. Click here to join our channel and stay updated with the latest news.

Next