Advertisement

ಚಿಕ್ಕಬಳ್ಳಾಪುರಕ್ಕೆ ಮತ್ತೊಮ್ಮೆ ಬಂಪರ್: ನಿಗಮ ಮಂಡಳಿಗಳಲ್ಲಿ ಇಬ್ಬರಿಗೆ ಪ್ರಾತಿನಿಧ್ಯ

10:53 PM Jul 25, 2022 | Team Udayavani |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರು ಪ್ರಭಾವಿ ನಾಯಕರನ್ನು ರಾಜ್ಯ ಸರಕಾರ ನಿಗಮ  ಮಂಡಳಿ ಅಧ್ಯಕ್ಷ ಸ್ಥಾನಗಳಲ್ಲಿ ಮತ್ತೊಮ್ಮೆ ಪ್ರಾತಿನಿದ್ಯ ನೀಡಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಗೌರಿಬಿದನೂರಿನ ಎನ್.ಎಂ. ರವಿ ನಾರಾಯಣ ರೆಡ್ಡಿ ಅವರನ್ನು ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಮತ್ತೊಂದಡೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಇತ್ತೀಚಿಗೆ ರಾಜೀನಾಮೆ ಸಲ್ಲಿಸಿದ ಕೆ.ವಿ. ನಾಗರಾಜ್ ಅವರನ್ನು ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next