Advertisement

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

10:40 AM Jun 14, 2024 | Team Udayavani |

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಜನಾಭಿಪ್ರಾಯ ಡಾ.ಕೆ.ಸುಧಾಕರ ಅವರ ಪರವಾಗಿ ಬಂದಿದ್ದು ನಾನು ಅದನ್ನು ಗೌರವಿಸುವೆ ಎಂದು‌ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಿಳಿದಿದ್ದಾರೆ.

Advertisement

ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜೀನಾಮೆ ನೀಡುವುದಾಗಿ ಹೇಳಿದ್ದು ನಿಜ ಆದರೆ ನನ್ನ ಸವಾಲು ಅವರು ಸ್ವೀಕಾರ ಮಾಡಿಲ್ಲ. ಆಗಾಗಿ ನಾನು ರಾಜೀನಾಮೆ ನೀಡುವ ಪ್ರಶ್ನೆ ಬರುವುದಿಲ್ಲ ಎಂದರು.

ಲೋಕಸಭಾ ಚುನಾವಣೆಯಲ್ಲಿ ನಾನೇ ಇದ್ದಿದ್ದರೆ ಗೇಮ್ ಪ್ಲಾನ್ ಬೇರೆ ರೀತಿ ಇರುತ್ತಿತ್ತು ಎಂದರು.

ತೆಲಂಗಾಣ ವಿಧಾನಸಭೆ ಚುನಾವಣೆ, ಲೋಕಸಭಾ ಚುನಾವಣೆ ಬಂದ ಕಾರಣ ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮ ಮಾಡಲಿಕ್ಕೆ ಆಗಿರಲಿಲ್ಲ. ಇನ್ನೂ ಮುಂದೆ ನಿರಂತರವಾಗಿ ಮುಂದುವರೆಯಲಿದೆ ಎಂದರು.

ನಮ್ಮ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂದ ಈಗಾಗಲೇ ನಾಲ್ವರನ್ನು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದರು

Advertisement
Advertisement

Udayavani is now on Telegram. Click here to join our channel and stay updated with the latest news.

Next