Advertisement

Chikkaballapura; ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು

08:59 PM Jun 18, 2024 | Team Udayavani |

ಚಿಕ್ಕಬಳ್ಳಾಪುರ: ಜಲ್ಲಿ ಕ್ರಷರ್ ಬೆಲ್ಟ್ ಗೆ ಸಿಲುಕಿ ಗಣಿ ಕೂಲಿ ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

Advertisement

ಅವಘಡದಲ್ಲಿ ಮೃತಪಟ್ಟ ಗಣಿ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ 55 ವರ್ಷದ ರಾಮಕಾಂತ್ ಗೌಂಡ್ ಎಂದು ಗುರುತಿಸಲಾಗಿದೆ. ಪ್ರಕರಣ ತಾಲೂಕಿನ ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಶಿವ ಸ್ಟೋನ್ ಕ್ರಷರ್‌ನಲ್ಲಿ ಈ ಘಟನೆ ನಡೆದಿದ್ದು, ಸುರಕ್ಷತಾ ಕ್ರಮಗಳನ್ನು ಅನುಸರಿಸದ ಕಾರಣ ಕಾರ್ಮಿಕ ಬಲಿ ಆಗಿದ್ದಾನೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್‌ಪಿ ಶಿವಕುಮಾರ್, ಆರಕ್ಷಕ ವೃತ್ತ ನಿರೀಕ್ಷಕ ಮಂಜುನಾಥ, ಪೆರೇಸಂದ್ರ ಗ್ರಾಮಾಂತರ ಠಾಣೆ ಪಿಎಸ್‌ಐ ಜಗದೀಶರೆಡ್ಡಿ ಹಾಗೂ ಮತ್ತಿತರರು ಭೇಟಿ ಮಾಡಿ ಪರಿಶೀಲನೆ ನಡೆಸಿದ ಬಳಿಕ ಗಣಿ ಮಾಲೀಕನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next