Advertisement

ಚಿಕ್ಕಬಳ್ಳಾಪುರ: ಜಿ.ಪಂ ಅಧ್ಯಕ್ಷರು ಶೀಘ್ರ ಗುಣಮುಖರಾಗಲೆಂದು ಅಧಿಕಾರಿಗಳಿಂದ ವಿಶೇಷ ಪೂಜೆ

08:32 PM Jul 14, 2020 | sudhir |

ಚಿಕ್ಕಬಳ್ಳಾಪುರ : ಕೋವಿಡ್-19 ಸೋಂಕುನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿ.ಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಶೀಘ್ರ ಗುಣಮುಖರಾಗಿ ಬರಲೆಂದು ಹಾರೈಸಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ನಗರದ ಹೊರ ವಲಯದ ಸೊಲಾಲಪ್ಪನ ದಿನ್ನೆಯಲ್ಲಿರುವ ವೀರಾಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

Advertisement

ಜಿಪಂ ಉಪ ಕಾರ್ಯದರ್ಶಿ ನೋಮೇಶ್ ಕುಮಾರ್, ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಶಿವಕುಮಾರ್ ಲಾಕೋರ್, ಸಾಮಾಜಿಕ ಅರಣ್ಯ ಇಲಾಖೆ ಶ್ರೀನಾಥ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಜಿಪಂ ಡಿಎಸ್ ನೇತೃತ್ವದಲ್ಲಿ ವೀರಾಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಹಲವು ದಿನಗಳ ಹಿಂದೆ ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯಗೆ ಕೋವಿಡ್-19 ಪಾಸಿಟೀವ್ ಬಂದಿದ್ದು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಕಾರಣಕ್ಕಾಗಿ ಜಿಪಂ ಸಭಾಂಗಣದಲ್ಲಿ ನಿಗಧಿಯಾಗಿದ್ದ ತ್ರೈಮಾಸಿಕ ಕೆಡಿಪಿ ಸಭೆ ಹಾಗೂ ಜಿಪಂ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next