Advertisement

ಚಿಕ್ಕಹಾಲಿವಾಣ ಗ್ರಾಮ: ಕಾಮಗಾರಿ ಅವ್ಯವಹಾರ ತನಿಖೆಗೆ ಒತ್ತಾಯ

04:39 PM Dec 20, 2021 | Team Udayavani |

ದಾವಣಗೆರೆ: ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಹಾಲಿವಾಣ ಗ್ರಾಮದಲ್ಲಿ ಒಂದೇ ಕಾಮಗಾರಿಯನ್ನು ಮೂರು ಬಾರಿ ನಡೆಸಲಾಗಿದೆ ಎಂದು ಅನುದಾನ ಬಿಡುಗಡೆ ಮಾಡಿಸಿಕೊಂಡು ಭ್ರಷ್ಟಾಚಾರ ನಡೆಸಿರುವ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ತನಿಖೆ ನಡೆಸಬೇಕು ಎಂದು ಗ್ರಾಮಸ್ಥ ಬಿ. ಪ್ರಕಾಶ್‌ ಬನ್ನೇರು ಒತ್ತಾಯಿಸಿದರು.

Advertisement

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದ ತಳವಾರ ಈರಪ್ಪ ಎಂಬುವರ ಹೊಲದಿಂದ ತಿಪ್ಪಾ ನಾಯ್ಕ ಎಂಬುವರ ಹೊಲದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಉದ್ಯೋಗ ಖಾತ್ರಿ, “ನಮ್ಮ ಹೊಲ ನಮ್ಮ ರಸ್ತೆ’ ಯೋಜನೆ ಹಾಗೂ ಮತ್ತೆ ಉದ್ಯೋಗ ಖಾತ್ರಿಯಡಿ ಕೈಗೊಳ್ಳಲಾಗಿದೆ. ಎರಡು ಬಾರಿ ಅನುದಾನ ಬಿಡುಗಡೆ ಮಾಡಿಸಿಕೊಳ್ಳಲಾಗಿದೆ. ಈಗ ಮತ್ತೆ ಅದೇ ಕಾಮಗಾರಿಗೆ ಅನುದಾನ ಬಿಡುಗಡೆ ಹಂತದಲ್ಲಿದೆ.

ಕಾಮಗಾರಿಯನ್ನು ಮೂರು ಬಾರಿ ನಡೆಸಲಾಗಿದೆ ಎಂದು ಅನುದಾನ ಬಿಡುಗಡೆ ಮಾಡಿಸಿಕೊಂಡಿರುವ ಬಗ್ಗೆ ಪ್ರಶ್ನಿಸಿದರೆ ಹಲ್ಲೆಗೆ ಯತ್ನ ನಡೆಸಲಾಗಿದೆ. ಜೀವ ಬೆದರಿಕೆ ಹಾಕಲಾಗಿದೆ. ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು. ಒಂದೇ ಕಾಮಗಾರಿಯನ್ನು ಮೂರು ಬಾರಿ ಮಾಡಿರುವಂತಹವರು ಗ್ರಾಮ ಪಂಚಾಯತಿ ಸದಸ್ಯರಾಗಿದ್ದರೆ ಸದಸ್ಯತ್ವ ರದ್ದುಪಡಿಸಬೇಕುಎಂದುಮುಖRಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನ ಸಂಬಂಧಿತ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು ಎಂದರು. ಗ್ರಾಮದ ಕೆ.ಎಸ್‌. ಹನುಮಂತಪ್ಪ, ಎಚ್‌. ಲಕ್ಷ್ಮಪ್ಪ, ಬಿ.ಕೆ. ಬಸವರಾಜಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next