Advertisement

ಯೋಗ ಜೀವನದ ಅಂಗವಾಗಲಿ

07:23 PM Jun 22, 2022 | Team Udayavani |

ಚಿಕ್ಕಮಗಳೂರು: ಯೋಗ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದ್ದುಅದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು. ಪ್ರತಿನಿತ್ಯ ಯೋಗಾಭ್ಯಾಸಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ಜಿಲ್ಲಾ ಸತ್ರಮತ್ತು ಪ್ರಧಾನ ನ್ಯಾಯಾ ಧೀಶೆ ಶುಭ ಗೌಡರ್‌ ತಿಳಿಸಿದರು.

Advertisement

ಮಂಗಳವಾರ ನಗರದಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ, ಜಿಲ್ಲಾನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ವಾರ್ತಾ ಇಲಾಖೆ ಮತ್ತು ಆಯುಷ್‌ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ವಿಶ್ವ ಯೋಗದಿನಾಚರಣೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕಡೂರು ರಾಘವೇಂದ್ರಯೋಗ ಅಸೋಸಿಯೇಶನ್‌ ಪ್ರಾಚಾರ್ಯೆ ವಿಜಯಾ ಗಿರೀಶ್‌ ಮಾತನಾಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್‌.ಸೋಮ,ಭಾರತ ಸ್ವಾಭಿಮಾನ ಯೋಗ ಟ್ರಸ್ಟ್‌ನ ಸುಮಾ ಪ್ರಸಾದ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next