Advertisement

ನಾವು ಒಟ್ಟಾಗಿ ಸೇರಿ ಉಪ ಚುನಾವಣೆಯನ್ನು ಗೆಲ್ಲುತ್ತೇವೆ‌‌: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

02:53 PM Oct 01, 2021 | Team Udayavani |

ಚಿಕ್ಕಮಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಶೈಲಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಇಡೀ ಭಾರತೀಯ ಜನತಾಪಕ್ಷ ತಂಡ ಒಟ್ಟಾಗಿ ಸೇರಿ ಮುಂಬರುವ ಎರಡು ಉಪ ಚುನಾವಣೆಯನ್ನು  ಎದುರಿಸುತ್ತೇವೆ ಹಾಗೂ ನಿಶ್ಚಯವಾಗಿ ಎರಡನ್ನೂ ಗೆಲ್ಲುತ್ತೇವೆ‌‌ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದಾರೆ.

Advertisement

ರಾಜ್ಯದಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ  ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಅವರು ನಮ್ಮ ಮುಖ್ಯಮಂತ್ರಿಗಳಾಗಿರುವ ಬಸವರಾಜ್ ಬೊಮ್ಮಾಯಿ ಅವರು ಆಡಳಿತಾತ್ಮಕ ವಿಚಾರವಾಗಿ ನಮಗೆ ಮಾರ್ಗದರ್ಶನ ನೀಡುತ್ತಾರೆ. ನಮ್ಮ ಹಿರಿಯರಾದ ಬಿ .ಎಸ್‌ ಯಡಿಯೂರಪ್ಪನವರು ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರನ್ನೂ ಒಳಗೊಂಡಂತೆ ನಾವು ಒಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.

ಇದನ್ನೂ ಓದಿ:ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವುದು ಬಿಜೆಪಿಗರ ರಕ್ತದಲ್ಲಿಯೇ ಸೇರಿಕೊಂಡಿದೆ: ವೆರೋನಿಕಾ

ಈ ಸಮಯದಲ್ಲಿ ದತ್ತಪೀಠದ ಕುರಿತಾಗಿ ಮಾತನಾಡಿರುವ ಅವರು ನ್ಯಾಯಾಲಯ ನೀಡಿರುವ ಮಾರ್ಗಸೂಚಿಯ ಅನ್ವಯ ಸರ್ಕಾರ ಸರಿಯಾದ ನಿರ್ಧಾರವನ್ನು ಕೈಗೊಳ್ಳಲಿದೆ ಎಂದರು.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next