Advertisement

ಶೃಂಗೇರಿ: ಬೈಕ್‌ಗೆ ಕಾರು ಢಿಕ್ಕಿಯಾಗಿ ಓರ್ವ ಸಾವು; ಇನ್ನೋರ್ವ ಗಂಭೀರ

09:57 AM Jul 22, 2022 | Team Udayavani |

ಚಿಕ್ಕಮಗಳೂರು: ಬೈಕ್ ಗೆ ಕಾರ್ ಢಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಶಿಡ್ಲೆ ಬಳಿ ನಡೆದಿದೆ.

Advertisement

ಶೃಂಗೇರಿ ತಾಲೂಕಿನ ಬೇಸೂರು ಗ್ರಾಮದ ನಿವಾಸಿ, ಶೇಖರ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

ಬೈಕ್‌ಗೆ ಕಾರ್ ಢಿಕ್ಕಿಯಾದ ರಭಸಕ್ಕೆ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ  ಶೇಖರ್‌ ಮೃತಪಟ್ಟಿದ್ದಾರೆ. ವಿಜಯೇಂದ್ರ ಎಂಬುವರ ಸ್ಥಿತಿ ಗಂಭೀರ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 40% ಆರೋಪಿಸುವ ಕಾಂಗ್ರೆಸ್ ನಮ್ಮ ಸರ್ಕಾರದ ಒಂದೇ ಒಂದು ಕೇಸ್ ಎತ್ತಿ ತೋರಿಸಲಿ:ಈಶ್ವರಪ್ಪ ಸವಾಲು

ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಅಪಘಾತದ ಸುದ್ದಿ ಕೇಳಿ ಸ್ಥಳದಲ್ಲಿ ನೂರಾರು ಜನರು ಜಮಾವಣೆಗೊಂಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next