Advertisement

ಗೋಣಿಬೀಡು ಠಾಣೆಗೆ ಐಜಿಪಿ ದೇವ್‌ಜ್ಯೋತಿ ರೇ ಭೇಟಿ

08:57 PM May 25, 2021 | Team Udayavani |

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಗೋಣಿಬೀಡು ಠಾಣೆಯ ಪಿಎಸ್‌ಐ ಅರ್ಜುನ್‌ ಯುವಕನ ಮೇಲೆ ದೌರ್ಜನ್ಯ ಎಸಗಿ ಮೂತ್ರ ಕುಡಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಯ ಲ್ಲಿ ಪಶ್ಚಿಮ ವಲಯ ಐಜಿಪಿ ದೇವ್‌ಜ್ಯೋತಿ ರೇ ಸೋಮ ವಾರ ಗೋಣಿಬೀಡು ಪೊಲೀಸ್‌ ಠಾಣೆಗೆ ಭೇಟಿ ನೀಡಿ ಪರಿಶೀಲಿಸಿದರು.

Advertisement

ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎಂ.ಎಚ್‌. ಅಕ್ಷಯ್‌, ತರೀಕೆರೆ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಡಿವೈಎಸ್‌ಪಿಗಳೊಂದಿಗೆ ಗೋಣಿಬೀಡು ಪೊಲೀಸ್‌ ಠಾಣೆಗೆ ಭೇಟಿ ನೀಡಿ ಯುವಕ, ಯುವಕನ ಸಂಬಂ ಧಿಕರು, ದಲಿತ ಸಂಘಟನೆ ಮುಖಂಡರ ಹೇಳಿಕೆ ಪಡೆದುಕೊಂಡು, ಆರೋಪ ಎದುರಿಸುತ್ತಿರುವ ಠಾಣಾಧಿ ಕಾರಿ, ಸಿಬ್ಬಂದಿಯಿಂದ ಮಾಹಿತಿ ಪಡೆದು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದರು.

ಈಗಾಗಲೇ ಪಿಎಸ್‌ಐ ಅರ್ಜುನ್‌ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಮಾನತುಗೊಳಿಸಿ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿದ್ದು ನಿಷ್ಪಕ್ಷಪಾತವಾದ ತನಿಖೆ ನಡೆಸಲಿದ್ದಾರೆ.

ನೊಂದವರಿಗೆ ನ್ಯಾಯ ಸಿಗಲಿದೆ. ಪೊಲೀಸರು ಮತ್ತು ಸಿಐಡಿ ತನಿಖೆಗೆ ಪೂರ್ಣ ಸಹಕಾರ ನೀಡಬೇಕೆಂದು ಯುವಕ ಪುನೀತ್‌ ಹಾಗೂ ದಲಿತ ಸಂಘಟನೆಗಳ ಮುಖಂಡರಿಗೆ ಐಜಿಪಿ ದೇವ್‌ ಜ್ಯೋತಿ ರೇ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next