Advertisement

ಲಾಕ್‌ಡೌನ್‌ನಲ್ಲೂ ಜನರ ಸರಾಗ ಓಡಾಟ!

10:34 PM Jun 08, 2021 | Team Udayavani |

ಚಿಕ್ಕಮಗಳೂರು:  ಕೋವಿಡ್‌ ಪಾಸಿಟಿವಿಟಿ ರೇಟ್‌ ಶೇ.25ರಿಂದ ಶೇ.26 ರಷ್ಟಿದೆ. ರಾಜ್ಯದಲ್ಲಿ ಜಿಲ್ಲೆ 2 ಅಥವಾ 3ನೇ ಸ್ಥಾನದಲ್ಲಿದೆ. ಜೂ.14ರ ವರೆಗೂ ರಾಜ್ಯ ಸರ್ಕಾರ ನಿರ್ಬಂಧ ವಿಧಿ ಸಿದೆ. ಆದರೆ, ಯಾವ ನಿರ್ಬಂಧಗಳಿಗೆ ಕ್ಯಾರೆ ಎನ್ನದೆ ಜನರ ಓಡಾಟ ಮಾತ್ರ ಸರಾಗವಾಗಿ ನಡೆಯುತ್ತಿದೆ.

Advertisement

ರಾಜ್ಯ ಸರ್ಕಾರದ ಆದೇಶದಂತೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅಕವಾಶ ಕಲ್ಪಿಸಿದೆ. ಹೋಮ್‌ ಡೆಲಿವರಿಗೆ ಅವಕಾಶ ಮಾಡಿಕೊಟ್ಟಿದೆ. ಹಣ್ಣು- ತರಕಾರಿಯನ್ನು ತಳ್ಳುಗಾಡಿಯ ಮೂಲಕ ಮನೆ ಬಾಗಿಲಿಗೆ ಹೋಗಿ ವ್ಯಾಪಾರ ಮಾಡಲು ಅನುಮತಿ ನೀಡಿದೆ. ಸರ್ಕಾರ ಇಷ್ಟೆಲ್ಲ ಅವಕಾಶಗಳನ್ನು ಮಾಡಿಕೊಟ್ಟರೂ ಜನರ ಓಡಾಟ ಮಾತ್ರ ನಿಲ್ಲುವ ಲಕ್ಷಣ ಕಾಣದಂತಾಗಿದೆ.

ಕೋವಿಡ್‌ ನಿಯಂತ್ರಿಸಲು ಸರ್ಕಾರ ನಿರ್ಬಂಧಗಳನ್ನು ವಿ ಧಿಸಿದ ಬಳಿಕ ಇದೇ ಮೊದಲು ಚಿಕ್ಕಮಗಳೂರು ನಗರದಲ್ಲಿ ಎಗ್ಗಿಲ್ಲದೆ ವಾಹನ ಸಂಚಾರ ನಡೆಸಿವೆ. ಎಂದಿನಂತೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಮಾರುಕಟ್ಟೆಯಲ್ಲಿ ಜನಸಂದಣಿಯಿಂದ ಕೂಡಿತ್ತು. 10 ಗಂಟೆಯ ಬಳಿಕವೂ ನಗರದಲ್ಲಿ ವಾಹನ ಮತ್ತು ಜನಸಂಚಾರ ಎಗ್ಗಿಲ್ಲದೆ ನಡೆದಿದ್ದು, ವಾಹನ ಸಂಚಾರವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಪ್ರತಿಯೊಂದು ಚೆಕ್‌ಪೋಸ್ಟ್‌ಗಳಲ್ಲೂ ವಾಹನಗಳು ಸರದಿಯಾಗಿ ನಿಲ್ಲುತ್ತಿದ್ದ ದೃಶ್ಯಗಳು ಕಂಡುಬಂದವು. ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ವಾಹನಗಳನ್ನು ತಡೆದು ನಿಲ್ಲಿಸಿ ವಿಚಾರಿಸಿದರು. ಕುಂಟು ನೆಪಗಳನ್ನು ಹೇಳಿಕೊಂಡು ಸಂಚಾರ ನಡೆಸುತ್ತಿದ್ದದ್ದು ಕಂಡುಬಂದಿತು. ಎಗ್ಗಿಲ್ಲದೆ ವಾಹನ ಸಂಚಾರ ನಡೆಸಿದ್ದರಿಂದ ಎಂ.ಜಿ. ರಸ್ತೆ, ಐಜಿ ರಸ್ತೆ, ಮಾರ್ಕೆಟ್‌ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಮತ್ತು ಭಾನುವಾರ ಬ್ಯಾಂಕ್‌ ಸೇರಿದಂತೆ ಇತರೆ ಕಾರ್ಯಚಟುವಟಿಕೆಗಳು ಇಲ್ಲದಿರುವ ಕಾರಣದಿಂದ ಗ್ರಾಮೀಣ ಮತ್ತು ನಗರ ಪ್ರದೇಶದಿಂದ ಹೆಚ್ಚಿನ ಜನರು ರಸ್ತೆಗಿಳಿದ್ದರಿಂದ ವಾಹನ ಸಂಚಾರ ಹೆಚ್ಚಳವಾಗಿದ್ದು, ಕೋವಿಡ್‌ ಭಯವಿಲ್ಲದೇ ಜನರು ಸಂಚಾರ ನಡೆಸಿದರು.

ಜಿಲ್ಲೆ ಕೋವಿಡ್‌ ಪಾಸಿಟಿವಿಟಿ ರೇಟ್‌ನಲ್ಲಿ ರಾಜ್ಯದಲ್ಲೇ 2 ಮತ್ತು 3ನೇ ಸ್ಥಾನದಲ್ಲಿದೆ. ಶೇ.25 ರಿಂದ 26ರಷ್ಟು ಪಾಸಿಟಿವಿಟಿ ರೇಟ್‌ ಇದೆ. ಗ್ರಾಮೀಣ ಪ್ರದೇಶಕ್ಕೆ ಹಬ್ಬಿರುವ ಕೋವಿಡ್‌ ಸೋಂಕು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ, ಈ ಹಿನ್ನೆಲೆಯಲ್ಲಿ ಸೋಂಕು ಮತ್ತಷ್ಟು ವ್ಯಾಪಿಸುವ ಭಯ ಎಲ್ಲರನ್ನೂ ಕಾಡುತ್ತಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next