Advertisement

ಮಳೆ ಅಬ್ಬರ: ಶೃಂಗೇರಿಯ ಕಪ್ಪೆ ಶಂಕರ ಜಲಾವೃತ

10:31 PM Jun 17, 2021 | Team Udayavani |

ಶೃಂಗೇರಿ: ತಾಲೂಕಿನಾದ್ಯಂತ ಮೃಗಶಿರ ಮಳೆ ಅಬ್ಬರಿಸುತ್ತಿದ್ದು, ಬುಧವಾರ ಮಳೆಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ತುಂಗಾ ನದಿ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದ್ದು, ಶ್ರೀಮಠದ ನದಿ ದಂಡೆಯಲ್ಲಿರುವ ಇತಿಹಾಸ ಪ್ರಸಿದ್ಧ ಕಪ್ಪೆ ಶಂಕರ ಪ್ರವಾಹದ ನೀರಿನಲ್ಲಿ ಮುಳುಗಿದೆ.

Advertisement

ಮಳೆಯ ಪ್ರಮಾಣ ಮುಂದುವರೆದರೆ ಗುರುವಾರ ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ತುಂಗಾ ನದಿಯ ಉಪ ನದಿಗಳಾದ ಮಾಲತಿ, ನಂದಿನಿ, ನಳಿನಿ ನೀರಿನ ಮಟ್ಟವೂ ಏರಿಕೆಯಾಗಿದೆ.

ಸಣ್ಣ ಸಣ್ಣ ಹಳ್ಳಗಳು ತುಂಬಿ ಹರಿಯುತ್ತಿವೆ. ಪ್ರವಾಹ ಉಂಟಾದಲ್ಲಿ ಗಾಂಧಿ ಮೈದಾನದ ಅಂಗಡಿಗಳು ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮುಚ್ಚಿದ್ದು, ಕೆವಿಆರ್‌ ರಸ್ತೆಯಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಮಳೆಯ ಪ್ರಮಾಣ ಹೆಚ್ಚಳವಾಗುತ್ತಿದ್ದು, ಆಗಾಗ ವಿದ್ಯುತ್‌ ವ್ಯತ್ಯಯ ಉಂಟಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next