Advertisement

ಯಡಿಯೂರಪ್ಪ ಮುಂದುವರೆಯಲಿ: ಕುಮಾರಸ್ವಾಮಿ

06:22 PM Jul 21, 2021 | Team Udayavani |

ಚಿಕ್ಕಮಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅ ಧಿಕಾರಕ್ಕೆ ತಂದವರು ಸಿಎಂ ಯಡಿಯೂರಪ್ಪ. ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಬೇಕೆಂದು ಕೇಂದ್ರ ಮುಖಂಡರಲ್ಲಿ ಮನವಿ ಮಾಡುತ್ತೇನೆ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿ ಎಂಬ ಅಪೇಕ್ಷೆ ಹೊಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬರುವಲ್ಲಿ ಅವರ ಶ್ರಮ ಬಹಳಷ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಿಎಂ ಸ್ಥಾನದಲ್ಲಿ ಮುಂದುವರಿಸುವಂತೆ ಮನವಿ ಮಾಡುತ್ತೇನೆ. ವಿಪಕ್ಷದವರು ಬಿಎಸ್‌ವೈ ಸಿಂಎಂ ಆಗಿ ಮುಂದುವರಿಯಲಿ ಎಂದು ಹೇಳುತ್ತಿದ್ದಾರೆ.

ಇದರಲ್ಲಿ ರಾಜಕೀಯವಿಲ್ಲ, ನಿಜವಾದ ಉದ್ದೇಶವಿದೆ. ಸಾಮೂಹಿಕ ನಾಯಕತ್ವ, ಜನರನ್ನು ಸೆಳೆಯುವ ಶಕ್ತಿಯುಳ್ಳ ಅಂತಹ ನಾಯಕರು ದೊರೆಯುವುದು ಅಪರೂಪ. ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಲಿದೆ. ಈ ಬಗ್ಗೆ ಕೇಂದ್ರ ಮುಖಂಡರು ಸಮೀಕ್ಷೆ ನಡೆಸಲಿ. ಪಕ್ಷದ ಹಿತದೃಷ್ಟಿಯಿಂದ ಮುಂಬರುವ ಚುನಾವಣೆವರೆಗೂ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಬಿಎಸ್‌ವೈ ಉತ್ತಮ ಗುರಿ ಇಟ್ಟುಕೊಂಡು ಮುಖ್ಯಮಂತ್ರಿಯಾದರು.

ಆದರೆ, ಕೋವಿಡ್‌ನಿಂದ ನಿರೀಕ್ಷೆಗಳು ಫಲಿಸಲಿಲ್ಲ. ಸಮರ್ಪಕವಾಗಿ ಎರಡು ಬಜೆಟ್‌ ಮಂಡಿಸಲು ಸಾಧ್ಯವಾಗಲಿಲ್ಲ. ಮುಂಬರುವ ಚುನಾವಣೆವರೆಗೆ ಅವರನ್ನೇ ಮುಂದುವರಿಸಿದರೆ ಪಕ್ಷ ಇನ್ನಷ್ಟು ಗಟ್ಟಿಯಾಗಲಿದೆ. ಮುಖ್ಯಮಂತ್ರಿ ಖುರ್ಚಿ ಮೇಲೆ ಎಲ್ಲರಿಗೂ ಆಸೆ ಇರುತ್ತದೆ. ಎಲ್ಲರನ್ನೂ ಒಮ್ಮತದಿಂದ ಕೊಂಡೊಯ್ಯವುದು ಕಠಿಣ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next