Advertisement

ಸಂಘ ಪರಿವಾರದ ವಿರುದ್ಧ ಮೊಕದ್ದಮೆಗೆ ಒತ್ತಾಯ

05:52 PM Apr 11, 2021 | Team Udayavani |

ಚಿಕ್ಕಮಗಳೂರು: ಗುಂಪು ಘರ್ಷಣೆಯಲ್ಲಿ ಯುವಕ ಮೃತಪಟ್ಟ ಘಟನೆಯನ್ನು ಕೋಮು ಗಲಭೆಯಂತೆ ಬಿಂಬಿಸಿ ನಗರದಲ್ಲಿ ಅಂಗಡಿ- ಮುಂಗಟ್ಟುಗಳನ್ನು  ದಿಢೀರ್‌ ಮುಚ್ಚಿಸಿ ಭೀತಿ ವಾತಾವರಣ ಸೃಷ್ಟಿಸಿದ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆಯನ್ನು ಒತ್ತಾಯಿಸಿದರು.

Advertisement

ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಪಕ್ಷ ಮತ್ತು ಸಂಘಟನೆಗಳ ಸಭೆ ನಡೆಸಿದ ಮುಖಂಡರು ಆರೋಪಿಗಳನ್ನು ಬಂ ಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಮೃತಪಟ್ಟ ಯುವಕ ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದ ಹಿನ್ನೆಲೆಯಲ್ಲಿ ಆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕು. ಎರಡು ಸ್ನೇಹಿತರ ಗುಂಪುಗಳ ನಡುವೆ ನಡೆದ ಘರ್ಷಣೆಯಾಗಿದೆ. ಕೋಮುಗಲಭೆಯಲ್ಲ ಎಂದು ಅಭಿಪ್ರಾಯಿಸಿದರು.

ಘಟನೆಯನ್ನು ಮುಂದಿಟ್ಟುಕೊಂಡು ಕೋಮುಗಲಭೆ ಎಂಬಂತೆ ಬಿಂಬಿಸಿ ನಗರದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಮತ್ತು ಸಂಘ ಪರಿವಾರ ಮುಂದಾಗಿದ್ದು ಖಂಡನೀಯ. ಅಶಾಂತಿ ಸೃಷ್ಟಿಸಲು ಕಾರಣವಾಗುವಂತಹ ಹೇಳಿಕೆ ನೀಡಿರುವ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೊಲೀಸರ ಅನುಮತಿ ಇಲ್ಲದೆ ಮೆರವಣಿಗೆ ನಡೆಸಿ ಕಾನೂನು ಉಲ್ಲಂಘಿಸಿರುವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಚ್‌. ದೇವರಾಜ್‌, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಜಿ.ಎಸ್‌. ಚಂದ್ರಪ್ಪ, ಕಾಂಗ್ರೆಸ್‌ ಮುಖಂಡ ರವೀಶ್‌ ಕ್ಯಾತನಬೀಡು, ರೂಬಿನ್‌ ಮೊಸೆಸ್‌, ಸಿಪಿಐ ಮುಖಂಡ ಎಚ್‌.ಎಂ. ರೇಣುಕಾರಾಧ್ಯ, ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಪಿ. ವೇಲಾಯುಧನ್‌, ರೈತ ಮುಖಂಡ ಗುರುಶಾಂತಪ್ಪ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಕರವೇ ಅಧ್ಯಕ್ಷ ತೇಗೂರು ಜಗದೀಶ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next