Advertisement

ಚಿಕ್ಕಮಗಳೂರು: ಆಸ್ಪತ್ರೆ ಎದುರು ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ

10:51 AM Jun 27, 2023 | Team Udayavani |
ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಮುಂಭಾಗ ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ತಾಲೂಕು ವೈದ್ಯಾಧಿಕಾರಿ ಡಾ.ದೇವರಾಜ್ ಅವರು ಹೆರಿಗೆ ಮಾಡಿಸಿಕೊಂಡು ತಾಯಿ ಹಾಗೂ ಮಗುವಿನ ಪ್ರಾಣ ರಕ್ಷಿಸಿದ್ದಾರೆ. ಅಜ್ಜಂಪುರ ತಾಲೂಕಿನ ಗಡಿರಂಗಾಪುರದ ತುಂಬು ಗರ್ಭಿಣಿ ಮಹಿಳೆ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದಳು. ಬಿ ನೆಗೆಟೀವ್ ರಕ್ತಕ್ಕಾಗಿ ಮಹಿಳೆ ಶಿವಮೊಗ್ಗಕ್ಕೆ ಹೋಗುತ್ತಿದ್ದರು. ಆರಂಭದ 3 ತಿಂಗಳು ಖಾಸಗಿ ಆಸ್ಪತ್ರೆಯಲ್ಲಿ ತೋರಿಸಿದ್ದರು. ಖಾಸಗಿ ಆಸ್ಪತ್ರೆಯಲ್ಲಿ 30 ಸಾವಿರ ಕೇಳಿದರು ಎಂದು ಶಿವಮೊಗ್ಗಕ್ಕೆ ಹೋಗಲು ಮಹಿಳೆ ನಿರ್ಧರಿಸಿದ್ದರು.
Advertisement

Udayavani is now on Telegram. Click here to join our channel and stay updated with the latest news.

Next